ಕಾರವಾರ:ದಾಂಡೇಲಿಯಲ್ಲಿ ಹಿರಿಯ ವಕೀಲ ಅಜಿತ ನಾಯಕ ಅವರನ್ನು ಹತ್ಯೆ ಮಾಡಿದ್ದನ್ನು ಖಂಡಿಸಿ ನಗರದಲ್ಲಿ ವಕೀಲರು ಶನಿವಾರ ಮೌನ ಮೆರವಣಿಗೆ ಮಾಡಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಸಭೆ ಸೇರಿದ ವಕೀಲರು, ‘ನಿಷ್ಪಕ್ಷಪಾತ ತನಿಖೆ ಕೈಗೊಂಡುಆರೋಪಿಯನ್ನು ಕೂಡಲೇ ಬಂಧಿಸಬೇಕು. ವಕೀಲರ ಮೇಲೆ ಪದೇಪದೇ ನಡೆಯುತ್ತಿರುವ ಇಂತಹ ದಾಳಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು’ ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್.ಕೆ.ಪವಾರ್, ಕಾರ್ಯದರ್ಶಿ ಮಹೇಶ್ ಬಿ.ಹರಿಕಂತ, ಖಜಾಂಚಿ ಎಸ್.ಎ.ಖಾಜಿ ಹಾಗೂ ನೂರಾರು ಸದಸ್ಯರು ಹಾಜರಿದ್ದರು.