ಚರಣ್ಕುಮಾರ್ ಕಿಟಕಿ ಏರಿ ಬ್ಯಾಗ್ ಒಳಗೆ ಹಾಕುತ್ತಿದ್ದ ವೇಳೆ ಚಾಲಕ ಏಕಾಏಕಿ ಬಸ್ ಹಿಂದಕ್ಕೆ ಚಲಾಯಿಸಿದ್ದಾನೆ. ಈ ವೇಳೆ ಆಯತಪ್ಪಿ ಬಸ್ನಿಂದ ಬಿದ್ದ ವಿದ್ಯಾರ್ಥಿ ತಲೆ ಸಿಮೆಂಟ್ ನೆಲಹಾಸಿಗೆ ಬಡಿದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು.ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.