ಅದ್ಧೂರಿ ವಿವಾಹ ಸಮಾರಂಭಗಳು ನಡೆಯುವ ಇಂದಿನ ದಿನಗಳಲ್ಲಿ, ಹುಬ್ಬಳ್ಳಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ರಿಜಿಸ್ಟರ್ಗೆ ಸಹಿ ಹಾಕಿ, ಪರಸ್ಪರ ಹಾರ ವಿನಿಮಯ ಮಾಡಿಕೊಂಡು ಸರಳ ವಿವಾಹವಾದ ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಮತ್ತು ಪುನರ್ವಸತಿ ಆಯುಕ್ತ ಉಜ್ವಲ್ ಕುಮಾರ್ ಘೋಷ್ ಅಭಿನಂದನೀಯರು. ಇವರ ಸರಳ ವಿವಾಹವು ಇತರರಿಗೂ ಮಾದರಿಯಾಗಿದೆ.