ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿ ನೀಡಿ ಎಂದು ಒತ್ತಾಯಿಸುವುದಕ್ಕಿಂತ ಭಾರತರತ್ನಕ್ಕೆ ಸರಿಸಮಾನವಾದ ಪ್ರಶಸ್ತಿಯನ್ನು ಶ್ರೀಗಳ ಹೆಸರಿನಲ್ಲಿ ಪ್ರತಿಷ್ಠಾಪಿಸಿ ‘ಅಧ್ಯಾತ್ಮ, ಶಿಕ್ಷಣ, ದಾಸೋಹ’ದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ, ಸಂಘ–ಸಂಸ್ಥೆಗಳಿಗೆ ಶ್ರೀಗಳ ಜನ್ಮದಿನದಂದು ನೀಡುವುದು ಹೆಚ್ಚು ಸೂಕ್ತ. ಸಂಬಂಧಿಸಿದವರು ಈ ನಿಟ್ಟಿನಲ್ಲಿ ಆಲೋಚಿಸಲಿ.