ಮೈಸೂರಿನ ಜಿಲ್ಲಾಧಿಕಾರಿ ಸಿ.ಶಿಖಾ ತಮಗೆ ಬೆದರಿಕೆ ಹಾಕಿದ ವ್ಯಕ್ತಿ ಮರಿಗೌಡ ರಾಜಕೀಯದಲ್ಲಿ ಬಲಾಢ್ಯ ಎಂದು ಗೊತ್ತಿದ್ದರೂ ತಲೆಕೆಡಿಸಿಕೊಳ್ಳದೆ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಆ ವ್ಯಕ್ತಿ ಲಕ್ಷಾಂತರ ರೂಪಾಯಿಯ ಲಕ್ಷುರಿ ಕಾರನ್ನು ರಸ್ತೆಯಲ್ಲೇ ಬಿಟ್ಟು ಓಡಿಹೋಗಿ ಬಚ್ಚಿಟ್ಟುಕೊಳ್ಳುವಂತಾಗಿದೆ.
ಶಿಖಾ ಅವರು ಈ ಮೂಲಕ ಜಿಲ್ಲಾಧಿಕಾರಿ ಹುದ್ದೆಯ ಘನತೆ, ಹೆಣ್ಣು ಮಕ್ಕಳ ಸ್ವಾಭಿಮಾನವನ್ನು ಹೆಚ್ಚಿಸಿದ್ದಾರೆ. ಅವರ ಆತ್ಮಸ್ಥೈರ್ಯ, ಬುದ್ಧಿವಂತಿಕೆ, ಸಮಯಪ್ರಜ್ಞೆ, ಕಾರ್ಯದಕ್ಷತೆ ಎಲ್ಲ ಹೆಣ್ಣು ಮಕ್ಕಳಿಗೂ ಅನುಕರಣೀಯವಾಗಿದೆ. ವಿವಿಧ ಕ್ಷೇತ್ರಗಳಲ್ಲಿ, ವಿವಿಧ ಸ್ಥಳಗಳಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಇವರು ಮಾದರಿಯಾಗಿದ್ದಾರೆ.