ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಬ್ಯಾಂಕ್‌ ಬೇಕು

Last Updated 9 ಆಗಸ್ಟ್ 2015, 19:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಮಳೆ ಅಭಾವದಿಂದ 103 ತಾಲ್ಲೂಕುಗಳಲ್ಲಿ ಬರದ ಛಾಯೆ ಮೂಡಿದೆ. ಇದರಿಂದ ರೈತರಿಗಷ್ಟೇ ಅಲ್ಲ ಜಾನುವಾರುಗಳಿಗೂ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ 275 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿವೆ. ಕೆಲವು ಪ್ರದೇಶಗಳಲ್ಲಿ ಮಳೆಯೇ ಆಗದೆ  ಮೇವಿನ ಸಮಸ್ಯೆ ಉಲ್ಬಣವಾಗಿದೆ.

ಒಣಬೇಸಾಯವನ್ನು ಅವಲಂಬಿಸಿರುವವರು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರ ಬರದ ಸಿದ್ಧತೆ ಬಗ್ಗೆ ಗಮನಹರಿಸಿ, ಶೀಘ್ರವೇ ಜಾನುವಾರುಗಳಿಗೆ ಗೋಶಾಲೆ ನಿರ್ಮಿಸಬೇಕು. ಮೇವಿನ ಬ್ಯಾಂಕ್ ಮತ್ತು ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ಘೋಷಣೆ ಮಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT