ಯುವ ರಾಜಕಾರಣಿ ರಮ್ಯಾ ‘ಪಾಕಿಸ್ತಾನ ನರಕವಲ್ಲ’, ‘ಹಾಗೆ ನೋಡಿದರೆ ಮಂಗಳೂರಲ್ಲೂ ನರಕ ಇದೆ’ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಯಿತು.
ಈಗ ಮತ್ತೆ ‘ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಕಾಂಗ್ರೆಸ್ನಿಂದ. ಬಿಜೆಪಿ, ಆರ್ಎಸ್ಎಸ್ನವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು’ ಎಂದು ಹೇಳಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ದೇಶ ಬ್ರಿಟಿಷರಿಂದ ಮುಕ್ತವಾಗಿ ಸ್ವಾತಂತ್ರ್ಯ ಪಡೆದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಅವರ ಈ ಹೇಳಿಕೆ ಉಳಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ.
ಏಕೆಂದರೆ ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಮಾತ್ರ ಹೋರಾಡಿಲ್ಲ. ಅಸಂಖ್ಯಾತ ಜನ ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ಅವೆಷ್ಟೋ ಸಂಘ-ಸಂಸ್ಥೆಗಳು ಹೋರಾಡಿದ್ದರ ಫಲವಾಗಿ ಸ್ವಾತಂತ್ರ್ಯ ದೊರೆತಿದೆಯೇ ಹೊರತು ಯಾವುದೋ ಒಂದು ಪಕ್ಷ ಅಥವಾ ವ್ಯಕ್ತಿಯಿಂದ ಅಲ್ಲ.