ಕನ್ನಡಿಗರು ಹೃದಯವಂತರು ಎಂಬ ಮಾತು ನೂರಕ್ಕೆ ನೂರು ಸತ್ಯ. ಕುಂಭದ್ರೋಣ ಮಳೆಯಿಂದ ತತ್ತರಿಸಿ ಹೋಗಿದ್ದ ಚೆನ್ನೈ ನಗರಕ್ಕೆ ಕನ್ನಡಿಗರು ಉದಾರವಾಗಿ ಸಹಾಯಹಸ್ತ ಚಾಚಿದ್ದಾರೆ.
ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಾದ ವಿವಾದ ನಡೆಯುತ್ತಿದ್ದರೂ ಮಾನವೀಯತೆ ದೃಷ್ಟಿಯಿಂದ ಎಲ್ಲವನ್ನೂ ಮರೆತು ನೆರವಿಗೆ ಮುಂದಾಗಿರುವುದು ಹೆಮ್ಮೆಯ ವಿಚಾರ. ಜನ ಯಾರೇ ಇರಲಿ, ಜಾಗ ಯಾವುದೇ ಇರಲಿ ಸಂತ್ರಸ್ತರ ನೆರವಿಗೆ ಧಾವಿಸಿರುವುದು ಕರ್ನಾಟಕದ ಗೌರವವನ್ನು ಎತ್ತಿ ಹಿಡಿದಿದೆ.