ಶಿಖರ್ ಧವನ್ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸುತ್ತಿರುವ ಸ್ಯಾಮ ಕರನ್, ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿರುವ ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್ ಹಾಗೂ ಕಗಿಸೊ ರಬಾಡ ಅವರು ಪಂಜಾಬ್ ತಂಡದ ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ಉತ್ತಮ ಲಯದಲ್ಲಿರುವ ಚೆನ್ನೈನ ಋತುರಾಜ್, ಡ್ಯಾರಿಲ್ ಮಿಚೆಲ್, ಶಿವಂ ದುಬೆ ಹಾಗೂ ರವೀಂದ್ರ ಜಡೇಜ ಅವರನ್ನು ಕಟ್ಟಿಹಾಕುವ ಸವಾಲು ಇದೆ. ಅಜಿಂಕ್ಯ ರಹಾನೆ ಹಾಗೂ ಮೋಯಿನ್ ಅಲಿ ಅವರು ಲಯಕ್ಕೆ ಮರಳಿದರೆ ಚೆನ್ನೈ ಬ್ಯಾಟಿಂಗ್ ಮತ್ತಷ್ಟು ಬಲಿಷ್ಠವಾಗಲಿದೆ. ಕೊನೆಯ ಓವರ್ನಲ್ಲಿ ಸಿಕ್ಸರ್, ಬೌಂಡರಿ ಸಿಡಿಸುವ ಧೋನಿಯ ಆಟಕ್ಕೂ ತಡೆಯೊಡ್ಡುವ ಸವಾಲು ಬೌಲರ್ಗಳಿಗೆ ಇದೆ.