‘ಕ್ಯಾನ್ಸರ್ ಪೀಡಿತರು ಚೇತರಿಸಿಕೊಳ್ಳುವ ಅವಧಿಯಲ್ಲಿ ಭಯ, ದುಃಖ, ಆತಂಕ ಮತ್ತು ಖಿನ್ನತೆಯನ್ನು ಅನುಭವಿಸುತ್ತಾರೆ. ಚೇತರಿಕೆಯ ನಂತರವೂ ಈ ಭಾವನೆಗಳು ಉಳಿಯುತ್ತವೆ. ಹೊಸ ಅವಕಾಶಗಳಿಗೆ ತೆರೆದುಕೊಳ್ಳಲು, ಮಾನಸಿಕವಾಗಿ ಸದೃಢವಾಗಲು ಅವರಲ್ಲಿನ ಭಯವನ್ನು ಹೋಗಲಾಡಿಸಬೇಕು. ಹೀಗಾಗಿ, ಆರ್ಸಿಬಿ ಫ್ರಾಂಚೈಸಿ ನೆರವಿನಿಂದ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಪ್ರವೇಶ ಕಲ್ಪಿಸಲಾಗಿತ್ತು’ ಎಂದು ಆಸ್ಪತ್ರೆ ಹೇಳಿದೆ.