‘ಸೂರ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಅವರು ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಅವರು, ಇನ್ನೂ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಜೂನ್ನಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ದೊಡ್ಡ ಜವಾಬ್ದಾರಿ ನಿಭಾಯಿಸಬೇಕಾಗಿರುವುದರಿಂದ, ಯಾವುದೇ ಅವಕಾಶ ಕೈಚೆಲ್ಲಲು ಬಿಸಿಸಿಐ ಮುಂದಾಗುತ್ತಿಲ್ಲ.