ರಾಮ ದೇವರು ನಮ್ಮ ಸಂಸ್ಕೃತಿಯ ಪ್ರತೀಕ. ಆದರೆ, ಕಾಂಗ್ರೆಸ್ ಮತ್ತು ಸಿಪಿಎಂ ಅದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಇವತ್ತು ದೇಶದಲ್ಲಿ ಆ ಪಕ್ಷದ ಸ್ಥಿತಿ ಏನಾಗಿದೆ ಎಂಬುದನ್ನು ನೋಡಬಹುದು. ಯಾರೆಲ್ಲಾ ರಾಮನನ್ನು ವಿರೋಧಿಸಿದ್ದಾರೋ ಅವರೆಲ್ಲಾ ಅವನತಿಯ ಅಂಚಿಗೆ ತಲುಪಿದ್ದಾರೆ ಎಂಬುದು ದೇಶದ ಇತಿಹಾಸವನ್ನು ಗಮನಿಸಿದರೆ ತಿಳಿಯುತ್ತದೆ
ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಸಚಿವ
ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಘೋಷವಾಕ್ಯ ಹೇಳುತ್ತಿದ್ದಾರೆ. ದೇಶದ ಸಂವಿಧಾನವನ್ನು ಬದಲಿಸಲು ಮತ್ತು ಜನರಿಂದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆ ಪಕ್ಷವು ಇಷ್ಟು ಬಹುಮತವನ್ನು ಬಯಸುತ್ತಿದೆ. ಸರ್ಕಾರವು ಸಂವಿಧಾನಬದ್ಧವಾಗಿ ಆಡಳಿತ ನಡೆಸಿದರೆ, ಯಾವುದೇ ಸಮುದಾಯದ ವಿರುದ್ಧ ಪೂರ್ವಗ್ರಹ ಇಟ್ಟುಕೊಳ್ಳುವ ಪ್ರಮೇಯವೇ ಇರುವುದಿಲ್ಲ. ಆದರೆ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ನ್ಯಾಯ ಒದಗಿಸಿಲ್ಲ
ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.