ಕಾವೇರಿ 5ನೇ ಹಂತದ ಯೋಜನೆ ಶುರುವಾಗುವವರೆಗೆ 2 ರಿಂದ 3 ತಿಂಗಳು ಮಾತ್ರ ಹೆಸರಘಟ್ಟ ಕೆರೆಯಿಂದ ಬೆಂಗಳೂರಿನ ದಾಸರಹಳ್ಳಿಗೆ ನೀರು ಸರಬರಾಜು ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. 0.05 ಟಿಎಂಸಿ ಅಡಿ ಮಾತ್ರ ನೀರನ್ನು ಸರಬರಾಜು ಮಾಡುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ.
-ಡಾ.ರಾಮ್ಪ್ರಸಾತ್ ಮನೋಹರ್ ಅಧ್ಯಕ್ಷ ಬೆಂಗಳೂರು ಜಲ ಮಂಡಳಿ
ಹೆಸರಘಟ್ಟ ಕೆರೆಯ ನೀರನ್ನು ಬೆಂಗಳೂರಿಗೆ ಹರಿಸುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತದೆ. ಕೆರೆಯ ಸುತ್ತಲಿನ 150 ಗ್ರಾಮಗಳ ಕೊಳವೆಬಾವಿಗಳಲ್ಲಿ ನೀರು ಬತ್ತಿ ಹೋಗುತ್ತದೆ. ರೈತರ ಕುಟುಂಬಗಳು ಬೀದಿಪಾಲಾಗುತ್ತವೆ. ಪ್ರಾಣಿ ಪಕ್ಷಿಗಳಿಗೂ ನೀರಿಲ್ಲದಂತಾಗುತ್ತದೆ. ಆದ್ದರಿಂದ ನೀರು ಪೂರೈಕೆ ಮಾಡಬಾರದು.
-ನಂಜುಂಡಪ್ಪ ಕಡತನಮಲೆ, ರಾಜ್ಯ ಕಾರ್ಯದರ್ಶಿ ಕರ್ನಾಟಕ ರಾಜ್ಯ ರೈತ ಸಂಘ