ಪಶುಸಂಗೋಪನಾ, ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ರವೀಂದ್ರ ಭೂರೆ ಮಾತನಾಡಿ,‘ಅನ್ನದಾತರಿಗೆ ಹಾಲಿನ ಉತ್ಪನ್ನಗಳ ತಯಾರಿಕೆ, ಮೇವಿನ ಸದ್ಬಳಕೆ, ಆರೋಗ್ಯ ರಕ್ಷಣೆ ಹಾಗೂ ಶುದ್ಧ ಹಾಲು ಉತ್ಪಾದನೆಯಂಥ ವಿಷಯಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು’ ಎಂದು ತಿಳಿಸಿದರು. ವಿಜಯಕುಮಾರ, ವಿಕ್ರಮ ಚಾಕೋತೆ ಹಾಗೂ ಶಿವಶರಣಪ್ಪ ಯಲಗೋಡ ಮಾತನಾಡಿದರು. 40 ಪಶುವೈದ್ಯಾಧಿಕಾರಿಗಳು ಭಾಗವಹಿಸಿದ್ದರು.