ಮಂಗಳೂರು: ‘ಬಿಜೆಪಿಯ ರಾಜ್ಯ ಮಟ್ಟದ ನಾಯಕರಿಂದ ಕರಾವಳಿಯ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಕರಾವಳಿ ಜಿಲ್ಲೆಯ ಮತದಾರರು ಏನಿದ್ದರೂ ಬಿಜೆಪಿಗೇ ಮತ ನೀಡುತ್ತಾರೆ ಎಂದು ಭಾವಿಸಿರುವ ಪಕ್ಷದ ಕೆಲ ಮುಖಂಡರು ಇಲ್ಲಿನ ನಾಯಕರನ್ನು ತುಳಿಯುತ್ತಿದ್ದಾರೆ’ ಎಂದು ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಆರೋಪಿಸಿದರು.