ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರದ್ದಾದ ಮದುವೆ; ವರನ ವಿರುದ್ಧ ಪ್ರಕರಣ ದಾಖಲು

Published 8 ಮೇ 2024, 4:46 IST
Last Updated 8 ಮೇ 2024, 4:46 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಸೋಮವಾರಪೇಟೆ: ಮದುವೆ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಮದುವೆಯ ವರ ಹರ್ಷಿತ್, ಆತನ ತಾಯಿ, ಅಣ್ಣ, ಅತ್ತಿಗೆ, ಸೋದರಮಾವ ಸೇರಿದಂತೆ ಒಟ್ಟು ಐವರ ಮೇಲೆ ವರದಕ್ಷಿಣೆ ಕಿರುಕುಳ, ಮಾನಹಾನಿ, ಮೋಸ, ವಂಚನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣದ ಕಲ್ಯಾಣ ಮಂಟಪವೊಂದರಲ್ಲಿ ಭಾನುವಾರ ತಾಲ್ಲೂಕಿನ ಯುವತಿಯೊಬ್ಬರ ವಿವಾಹವು ತುಮಕೂರು ಜಿಲ್ಲೆಯ ಯುವಕನೊಂದಿಗೆ ನಡೆಯಬೇಕಿತ್ತು. ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಬಂದಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ವಿಚಾರಕ್ಕೆ ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಭಾನುವಾರ ಬೆಳಿಗ್ಗೆ ಅಂತಿಮವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಬೇಸರಗೊಂಡ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT