ಕರ್ನಾಟಕ ಜನಸೇನೆ ಸಂಘಟನೆ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘1984ರಿಂದ 1991ರವರೆಗೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಶ್ರೀನಗರದ ಮೀಡಿಯಂ ರೆಜಿಮೆಂಟಿನಲ್ಲಿ ಸೇವೆ ಸಲ್ಲಿಸುವಾಗ ಸರಿಯಾದ ಆಹಾರ ನೀಡುತ್ತಿರಲಿಲ್ಲ. ಅಂದಿನ ಪರಿಸ್ಥಿತಿ ಇಂದಿಗೂ ಮುಂದುವರೆದಿದೆ ಎಂಬುದು ತೀರಾ ನಾಚಿಕೆಗೇಡಿನ ಸಂಗತಿ’ ಎಂದರು.