‘ಪೊಲೀಸ್ ವ್ಯವಸ್ಥೆ ನಿಷ್ಕ್ರಿಯಗೊಳಿಸಿರುವ ನಿಮ್ಮ ಸರ್ಕಾರದ ನೆರಳಲ್ಲಿ ಅಮಾಯಕ ಹೆಣ್ಣುಮಕ್ಕಳು ರಕ್ಷಣೆಗಾಗಿ ಪರಿತಪಿಸಿ ಪ್ರಾಣ ಭೀತಿಯಿಂದ ತತ್ತರಿಸುತ್ತಿದ್ದಾರೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯ ಬೆನ್ನಲ್ಲೇ ಕೊಡಗಿನಲ್ಲಿ ಅಪ್ರಾಪ್ತೆ ಮೀನಾಳ ರುಂಡ ಕಡಿದು ರಾಕ್ಷಸನೊಬ್ಬ ಅಟ್ಟಹಾಸ ಮೆರೆದು, ಆಕೆಯ ರಕ್ತ ಆರುವ ಮುನ್ನವೇ ಅಂಜಲಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ಘಟಿಸಿದೆ’ ಎಂದಿದ್ದಾರೆ.