<p>ತುಮಕೂರು: ಬದುಕಿನಲ್ಲಿ ಎದುರಾಗುವ ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂದು ಭಾರತ ಅಂಧ ಮಹಿಳಾ ಕ್ರಿಕೆಟ್ ಪಟು ಟಿ.ಸಿ.ದೀಪಿಕಾ ಸಲಹೆ ಮಾಡಿದರು.</p>.<p>ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಮತ್ತು ಮಹಿಳಾ ಸಬಲೀಕರಣ ಕುರಿತ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>ಕಷ್ಟ–ಸುಖ, ನೋವು– ನಲಿವು ಬದುಕಿನ ಸಹಜ ಪ್ರಕ್ರಿಯೆಗಳು. ಯಾವುದಕ್ಕೂ ಕುಗ್ಗದೆ ಮುಂದೆ ಸಾಗಬೇಕು ಎಂದರು. ತಮ್ಮ ಜೀವನದ ಕಹಿ ಘಟನೆ ಮೆಲುಕು ಹಾಕಿದರು. ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳು, ತಾವು ಎದುರಿಸಿದ ಕಷ್ಟಗಳನ್ನು ಸ್ಮರಿಸಿದರು.</p>.<p>ಯೋಗ ತರಬೇತುದಾರರಾದ ಎಸ್.ಪಿ.ನಂದಿನಿ, ‘ಯೋಗ ಒಂದು ಸ್ಪರ್ಧೆ, ಫ್ಯಾಷನ್ ಅಲ್ಲ. ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮಾನಸಿಕ ಸ್ಥಿರತೆ, ಏಕಾಗ್ರತೆ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಪೂರಕವಾಗಿದೆ. ಆಧುನಿಕ ಔಷಧಿಗಳ ಮೇಲಿನ ಅವಲಂಬನೆ ತಗ್ಗಿಸಿ ಆರೋಗ್ಯ ಸುಧಾರಿಸುತ್ತದೆ’ ಎಂದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಎಸ್.ಶ್ರೀನಿವಾಸ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಎ.ಎಂ.ಮಂಜುನಾಥ್, ಸಂಚಾಲಕರಾದ ಕೆ.ಎನ್.ಚೇತನ್ ಪ್ರತಾಪ್, ಮಂಗಳಗೌರಿ, ಅನಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-294752994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಬದುಕಿನಲ್ಲಿ ಎದುರಾಗುವ ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂದು ಭಾರತ ಅಂಧ ಮಹಿಳಾ ಕ್ರಿಕೆಟ್ ಪಟು ಟಿ.ಸಿ.ದೀಪಿಕಾ ಸಲಹೆ ಮಾಡಿದರು.</p>.<p>ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಮತ್ತು ಮಹಿಳಾ ಸಬಲೀಕರಣ ಕುರಿತ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>ಕಷ್ಟ–ಸುಖ, ನೋವು– ನಲಿವು ಬದುಕಿನ ಸಹಜ ಪ್ರಕ್ರಿಯೆಗಳು. ಯಾವುದಕ್ಕೂ ಕುಗ್ಗದೆ ಮುಂದೆ ಸಾಗಬೇಕು ಎಂದರು. ತಮ್ಮ ಜೀವನದ ಕಹಿ ಘಟನೆ ಮೆಲುಕು ಹಾಕಿದರು. ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳು, ತಾವು ಎದುರಿಸಿದ ಕಷ್ಟಗಳನ್ನು ಸ್ಮರಿಸಿದರು.</p>.<p>ಯೋಗ ತರಬೇತುದಾರರಾದ ಎಸ್.ಪಿ.ನಂದಿನಿ, ‘ಯೋಗ ಒಂದು ಸ್ಪರ್ಧೆ, ಫ್ಯಾಷನ್ ಅಲ್ಲ. ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮಾನಸಿಕ ಸ್ಥಿರತೆ, ಏಕಾಗ್ರತೆ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಪೂರಕವಾಗಿದೆ. ಆಧುನಿಕ ಔಷಧಿಗಳ ಮೇಲಿನ ಅವಲಂಬನೆ ತಗ್ಗಿಸಿ ಆರೋಗ್ಯ ಸುಧಾರಿಸುತ್ತದೆ’ ಎಂದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಎಸ್.ಶ್ರೀನಿವಾಸ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಎ.ಎಂ.ಮಂಜುನಾಥ್, ಸಂಚಾಲಕರಾದ ಕೆ.ಎನ್.ಚೇತನ್ ಪ್ರತಾಪ್, ಮಂಗಳಗೌರಿ, ಅನಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-294752994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>