ಮಂಡ್ಯ: ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬೀಳುವುದಕ್ಕೂ ಮೊದಲೇ ಜೆಡಿಎಸ್–ಕಾಂಗ್ರೆಸ್ ಅಭ್ಯರ್ಥಿ ಕೆ.ನಿಖಿಲ್ ಸಂಸದ ಪಟ್ಟ ಅಲಂಕರಿಸಿದ್ದಾರೆ. ವಿವಾಹವೊಂದರ ಆಹ್ವಾನ ಪತ್ರಿಕೆಯಲ್ಲಿ ‘ವಿಶೇಷ ಆಹ್ವಾನಿತರು ಕೆ.ನಿಖಿಲ್ ಕುಮಾರಸ್ವಾಮಿ, ಸಂಸದರು, ಮಂಡ್ಯ ಜಿಲ್ಲೆ’ ಎಂದು ಭಾವಚಿತ್ರದೊಂದಿಗೆ ಮುದ್ರಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.