<p><strong>ಬೆಳಗಾವಿಯಲ್ಲಿ ತಾಂತ್ರಿಕ ವಿ.ವಿ. ಸ್ಥಾಪನೆ ನಿರ್ಧಾರ</strong></p>.<p><strong>ಬೆಂಗಳೂರು, ಜುಲೈ 1–</strong> ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಬೆಳಗಾವಿಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಧಾರವಾಡ ಜಿಲ್ಲೆಯ ಅರಭಾವಿಯಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಸರ್ಕಾರ ಇಂದು ನಿರ್ಧರಿಸಿದೆ.</p>.<p>ಬಜೆಟ್ನಲ್ಲಿ ನೀಡಿದ್ದ ಭರವಸೆಯಂತೆ ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಗೋಕಾಕ ತಾಲ್ಲೂಕಿನ ಅರಭಾವಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪಿಸಲು ಸಚಿವ ಸಂಪುಟ ಸಭೆ<br />ತೀರ್ಮಾನಿಸಿದುದಾಗಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<p><strong>‘10 ಶಾಸಕರ ಉಚ್ಚಾಟನೆ ಶೀಘ್ರ’</strong></p>.<p><strong>ರಾಯಚೂರು, ಜುಲೈ 1–</strong> ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದೊಂದಿಗೆ ಸೇರಿ ಕಾಂಗೈಗೆ ‘ದ್ರೋಹ ಬಗೆಯುತ್ತಿರುವ’ ಹತ್ತು ಜನ ಶಾಸಕರನ್ನು ಕಾಂಗೈನಿಂದ ಇಷ್ಟರಲ್ಲಿಯೇ ಉಚ್ಚಾಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. (ಐ) ಅಧ್ಯಕ್ಷವಿ. ಕೃಷ್ಣರಾವ್ ಪ್ರಕಟಿಸಿದ್ದಾರೆ.</p>.<p> ‘ಪ್ರಜಾವಾಣಿ’ಯೊಂದಿಗೆ ಮಾತನಾಡು ತ್ತಿದ್ದ ಅವರು, ಸಮರಕ್ಕೆ ಇಳಿದ ಬಂಗಾರಪ್ಪ ಅವರನ್ನು ಕಾಂಗೈನಿಂದ ಹೊರಹಾಕುವುದು ಅನಿವಾರ್ಯವಾಗಿತ್ತು ಎಂದು ಹಿನ್ನೆಲೆಯನ್ನು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿಯಲ್ಲಿ ತಾಂತ್ರಿಕ ವಿ.ವಿ. ಸ್ಥಾಪನೆ ನಿರ್ಧಾರ</strong></p>.<p><strong>ಬೆಂಗಳೂರು, ಜುಲೈ 1–</strong> ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಬೆಳಗಾವಿಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಧಾರವಾಡ ಜಿಲ್ಲೆಯ ಅರಭಾವಿಯಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಸರ್ಕಾರ ಇಂದು ನಿರ್ಧರಿಸಿದೆ.</p>.<p>ಬಜೆಟ್ನಲ್ಲಿ ನೀಡಿದ್ದ ಭರವಸೆಯಂತೆ ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಗೋಕಾಕ ತಾಲ್ಲೂಕಿನ ಅರಭಾವಿಯಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪಿಸಲು ಸಚಿವ ಸಂಪುಟ ಸಭೆ<br />ತೀರ್ಮಾನಿಸಿದುದಾಗಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.</p>.<p><strong>‘10 ಶಾಸಕರ ಉಚ್ಚಾಟನೆ ಶೀಘ್ರ’</strong></p>.<p><strong>ರಾಯಚೂರು, ಜುಲೈ 1–</strong> ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದೊಂದಿಗೆ ಸೇರಿ ಕಾಂಗೈಗೆ ‘ದ್ರೋಹ ಬಗೆಯುತ್ತಿರುವ’ ಹತ್ತು ಜನ ಶಾಸಕರನ್ನು ಕಾಂಗೈನಿಂದ ಇಷ್ಟರಲ್ಲಿಯೇ ಉಚ್ಚಾಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. (ಐ) ಅಧ್ಯಕ್ಷವಿ. ಕೃಷ್ಣರಾವ್ ಪ್ರಕಟಿಸಿದ್ದಾರೆ.</p>.<p> ‘ಪ್ರಜಾವಾಣಿ’ಯೊಂದಿಗೆ ಮಾತನಾಡು ತ್ತಿದ್ದ ಅವರು, ಸಮರಕ್ಕೆ ಇಳಿದ ಬಂಗಾರಪ್ಪ ಅವರನ್ನು ಕಾಂಗೈನಿಂದ ಹೊರಹಾಕುವುದು ಅನಿವಾರ್ಯವಾಗಿತ್ತು ಎಂದು ಹಿನ್ನೆಲೆಯನ್ನು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>