<p><strong>ಬೆಂಗಳೂರು:</strong> ‘ಕೊಡಗು ಜಿಲ್ಲೆಯ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿರುವ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಗೆ ಕೇಂದ್ರ ಸರ್ಕಾರದಿಂದ ಅಗತ್ಯ ಅನುಮತಿ ಪಡೆದಿಲ್ಲ ಎಂದಾದರೆ ಮುಚ್ಚಲು ಆದೇಶಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.</p>.<p>ಈ ಕುರಿತಂತೆ ಕೊಡಗಿನ ವಿರೂಪಾಕ್ಷಪುರದ ಪಿ.ಎಸ್. ಮೋಹನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್. ಓಕಾ, ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಲ್.ರಾಜಣ್ಣ, ‘ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಗೆ ಅನುಮತಿ ಪಡೆದಿಲ್ಲ. ರೆಸಾರ್ಟ್ ಚಟುವಟಿಕೆಯಿಂದ ಅರಣ್ಯ ಪ್ರದೇಶದಲ್ಲಿ ಪರಿಸರ ನಾಶವಾಗುತ್ತಿದೆ’ ಎಂದುಆಕ್ಷೇಪಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರಣ್ಯ ಪ್ರದೇಶದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ. ಒಂದು ವೇಳೆ ನಡೆಸುವುದಾದರೆ ಅದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ. ಈ ಪ್ರಕರಣದಲ್ಲಿ ಅನುಮತಿ ಪಡೆಯಲಾಗಿದೆಯೇ ಹೇಗೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.‘ಮಾಹಿತಿ ಒದಗಿಸಲು ಸಮಯಾವಕಾಶ ಬೇಕು’ ಎಂದು ಸರ್ಕಾರಿ ವಕೀಲರು ಕೋರಿದ ಕಾರಣ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೊಡಗು ಜಿಲ್ಲೆಯ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿರುವ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಗೆ ಕೇಂದ್ರ ಸರ್ಕಾರದಿಂದ ಅಗತ್ಯ ಅನುಮತಿ ಪಡೆದಿಲ್ಲ ಎಂದಾದರೆ ಮುಚ್ಚಲು ಆದೇಶಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.</p>.<p>ಈ ಕುರಿತಂತೆ ಕೊಡಗಿನ ವಿರೂಪಾಕ್ಷಪುರದ ಪಿ.ಎಸ್. ಮೋಹನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್. ಓಕಾ, ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಲ್.ರಾಜಣ್ಣ, ‘ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಗೆ ಅನುಮತಿ ಪಡೆದಿಲ್ಲ. ರೆಸಾರ್ಟ್ ಚಟುವಟಿಕೆಯಿಂದ ಅರಣ್ಯ ಪ್ರದೇಶದಲ್ಲಿ ಪರಿಸರ ನಾಶವಾಗುತ್ತಿದೆ’ ಎಂದುಆಕ್ಷೇಪಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರಣ್ಯ ಪ್ರದೇಶದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ. ಒಂದು ವೇಳೆ ನಡೆಸುವುದಾದರೆ ಅದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ. ಈ ಪ್ರಕರಣದಲ್ಲಿ ಅನುಮತಿ ಪಡೆಯಲಾಗಿದೆಯೇ ಹೇಗೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.‘ಮಾಹಿತಿ ಒದಗಿಸಲು ಸಮಯಾವಕಾಶ ಬೇಕು’ ಎಂದು ಸರ್ಕಾರಿ ವಕೀಲರು ಕೋರಿದ ಕಾರಣ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>