<p><strong>ಮುಂಬೈ (ಪಿಟಿಐ):</strong> ಹೆದ್ದಾರಿಯಲ್ಲಿ ಗುಂಡಿಗಳು ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ, ಕಿರಿಯ ಎಂಜಿನಿಯರ್ ಮೇಲೆ ಕೆಸರು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೊ ಬಹಿರಂಗವಾಗಿದೆ.</p>.<p>ನಿತೇಶ್,ಕಣಕಾವಲಿ ನಗರಸಭೆಯ ಅಧ್ಯಕ್ಷ ಸಮೀರ್ ನಲವಾಡೆ ಮತ್ತು ಬೆಂಬಲಿಗರು ಕೃತ್ಯ ಎಸಗಿದ್ದಾರೆ. ಮಹಾರಾಷ್ಟ್ರದ ಕಣಕಾವಲಿ ಸಮೀಪ ಮುಂಬೈ–ಗೋವಾ ಹೆದ್ದಾರಿಯಲ್ಲಿ ಗುರುವಾರ ಈ ಘಟನೆ ನಡೆದಿದೆ.</p>.<p>ಎಂಜಿನಿಯರ್ ಅವರನ್ನು ಎಳೆದಾಡಿ, ಸೇತುವೆಯ ತಡೆಗೋಡೆ ಕಡೆಗೆ ಎಳೆದೊಯ್ದು ತಲೆಯ ಮೇಲೆ ಬಕೆಟ್ನಲ್ಲಿದ್ದ ಕೆಸರು ಸುರಿಯುತ್ತಿರುವುದು ಈ ವಿಡಿಯೊದಲ್ಲಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಹಲ್ಲೆಗೆ ಒಳಗಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಿರಿಯ ಎಂಜಿನಿ ಯರ್ ಪ್ರಕಾಶ್ ಖೇಡೆಕರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 353ರ ಅನ್ವಯ ಸರ್ಕಾರಿ ನೌಕರರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ.</p>.<p>‘ಈ ರಸ್ತೆಯಲ್ಲಿ ಹೋಗುವ ವಾಹನ ಚಾಲಕರು ನಿತ್ಯವೂ ದೂಳು ಕುಡಿಯುವ ಸ್ಥಿತಿ ಇದೆ. ನೀವು ಅದನ್ನು ಅನುಭವಿಸಿ’ ಎಂದು ರಾಣೆ ಮತ್ತು ನಲವಾಡೆ ರೇಗುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.</p>.<p>ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯಇಂದೋರ್ನಲ್ಲಿ ಕೆಲದಿನಗಳ ಹಿಂದೆ ಕ್ರಿಕೆಟ್ ಬ್ಯಾಟ್ನಿಂದ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು ನೆನಪಿನಿಂದ ಮಾಸುವ ಮುನ್ನವೇ ಈ ಘಟನೆ ನಡೆದಿದೆ.</p>.<p class="Subhead"><strong>ಶಾಸಕ ವಶಕ್ಕೆ:</strong> ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರ ಪುತ್ರನೂ ಆಗಿರುವ, ಶಾಸಕ ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಹೆದ್ದಾರಿಯಲ್ಲಿ ಗುಂಡಿಗಳು ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ, ಕಿರಿಯ ಎಂಜಿನಿಯರ್ ಮೇಲೆ ಕೆಸರು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೊ ಬಹಿರಂಗವಾಗಿದೆ.</p>.<p>ನಿತೇಶ್,ಕಣಕಾವಲಿ ನಗರಸಭೆಯ ಅಧ್ಯಕ್ಷ ಸಮೀರ್ ನಲವಾಡೆ ಮತ್ತು ಬೆಂಬಲಿಗರು ಕೃತ್ಯ ಎಸಗಿದ್ದಾರೆ. ಮಹಾರಾಷ್ಟ್ರದ ಕಣಕಾವಲಿ ಸಮೀಪ ಮುಂಬೈ–ಗೋವಾ ಹೆದ್ದಾರಿಯಲ್ಲಿ ಗುರುವಾರ ಈ ಘಟನೆ ನಡೆದಿದೆ.</p>.<p>ಎಂಜಿನಿಯರ್ ಅವರನ್ನು ಎಳೆದಾಡಿ, ಸೇತುವೆಯ ತಡೆಗೋಡೆ ಕಡೆಗೆ ಎಳೆದೊಯ್ದು ತಲೆಯ ಮೇಲೆ ಬಕೆಟ್ನಲ್ಲಿದ್ದ ಕೆಸರು ಸುರಿಯುತ್ತಿರುವುದು ಈ ವಿಡಿಯೊದಲ್ಲಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಹಲ್ಲೆಗೆ ಒಳಗಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಿರಿಯ ಎಂಜಿನಿ ಯರ್ ಪ್ರಕಾಶ್ ಖೇಡೆಕರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 353ರ ಅನ್ವಯ ಸರ್ಕಾರಿ ನೌಕರರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ.</p>.<p>‘ಈ ರಸ್ತೆಯಲ್ಲಿ ಹೋಗುವ ವಾಹನ ಚಾಲಕರು ನಿತ್ಯವೂ ದೂಳು ಕುಡಿಯುವ ಸ್ಥಿತಿ ಇದೆ. ನೀವು ಅದನ್ನು ಅನುಭವಿಸಿ’ ಎಂದು ರಾಣೆ ಮತ್ತು ನಲವಾಡೆ ರೇಗುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.</p>.<p>ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯಇಂದೋರ್ನಲ್ಲಿ ಕೆಲದಿನಗಳ ಹಿಂದೆ ಕ್ರಿಕೆಟ್ ಬ್ಯಾಟ್ನಿಂದ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು ನೆನಪಿನಿಂದ ಮಾಸುವ ಮುನ್ನವೇ ಈ ಘಟನೆ ನಡೆದಿದೆ.</p>.<p class="Subhead"><strong>ಶಾಸಕ ವಶಕ್ಕೆ:</strong> ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರ ಪುತ್ರನೂ ಆಗಿರುವ, ಶಾಸಕ ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>