<p><strong>ಮಂಗಳೂರು: </strong>ರದ್ದುಗೊಂಡಿದ್ದ ವಿಮಾನ ಪ್ರಯಾಣ ಟಿಕೆಟ್ ಬಳಸಿಕೊಂಡು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ನಿರ್ಗಮನ ವಲಯ ಪ್ರವೇಶಿಸಿದ್ದ ಒಬ್ಬನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.</p>.<p>ಕೆವಿನ್ ವೆರ್ನಾನ್ ಫರ್ನಾಂಡಿಸ್ ಎಂಬುವವರು ಪತ್ನಿಯೊಂದಿಗೆ ಸೋಮವಾರ ಸಂಜೆ 5.25ಕ್ಕೆ ಚೆಕ್ ಇನ್ ಕೌಂಟರ್ ಮೂಲಕ ವಿಮಾನ ನಿಲ್ದಾಣದ ಒಳಕ್ಕೆ ಪ್ರವೇಶಿಸಿದ್ದರು. 8.05ಕ್ಕೆ ದುಬೈಗೆ ಹೊರಡಲಿದ್ದ ಏರ್ ಇಂಡಿಯಾ ವಿಮಾನದ ಟಿಕೆಟ್ ಮತ್ತು ಪಾಸ್ಪೋರ್ಟ್ ಪ್ರದರ್ಶಿಸಿ ಪ್ರಯಾಣಿಕರ ನಿರ್ಗಮನ ಪ್ರದೇಶಕ್ಕೆ ತೆರಳಿದ್ದರು.</p>.<p>ಸಂಜೆ 6.01ರ ವೇಳೆಗೆ ಕೆವಿನ್ ನಿರ್ಗಮನ ದ್ವಾರದಿಂದ ವಾಪಸು ಬರುತ್ತಿರುವಾಗ ಸಿಐಎಸ್ಎಫ್ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪತಿ ಮತ್ತು ಪತ್ನಿಯ ಪ್ರಯಾಣಕ್ಕೆ ಎರಡು ಟಿಕೆಟ್ ಖರೀದಿಸಲಾಗಿತ್ತು. ನಂತರ ಪತಿಯ ಪ್ರಯಾಣದ ಟಿಕೆಟ್ ರದ್ದುಗೊಳಿಸಲಾಗಿತ್ತು. ಆದರೆ, ರದ್ದುಗೊಂಡ ಸೀಟಿನ ಇ–ಟಿಕೆಟ್ ಕೆವಿನ್ ಬಳಿಯೇ ಉಳಿದಿತ್ತು. ಅದನ್ನು ಬಳಸಿಕೊಂಡು ಪತ್ನಿಗೆ ಸಹಾಯ ಮಾಡಲು ವಿಮಾನ ನಿಲ್ದಾಣದ ಒಳಕ್ಕೆ ಪ್ರವೇಶಿಸಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.</p>.<p>ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರ ವಶಕ್ಕೆ ನೀಡಿರುವ ಸಿಐಎಸ್ಎಫ್ ಅಧಿಕಾರಿಗಳು, ಈ ಸಂಬಂಧ ದೂರೊಂದನ್ನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ರದ್ದುಗೊಂಡಿದ್ದ ವಿಮಾನ ಪ್ರಯಾಣ ಟಿಕೆಟ್ ಬಳಸಿಕೊಂಡು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ನಿರ್ಗಮನ ವಲಯ ಪ್ರವೇಶಿಸಿದ್ದ ಒಬ್ಬನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.</p>.<p>ಕೆವಿನ್ ವೆರ್ನಾನ್ ಫರ್ನಾಂಡಿಸ್ ಎಂಬುವವರು ಪತ್ನಿಯೊಂದಿಗೆ ಸೋಮವಾರ ಸಂಜೆ 5.25ಕ್ಕೆ ಚೆಕ್ ಇನ್ ಕೌಂಟರ್ ಮೂಲಕ ವಿಮಾನ ನಿಲ್ದಾಣದ ಒಳಕ್ಕೆ ಪ್ರವೇಶಿಸಿದ್ದರು. 8.05ಕ್ಕೆ ದುಬೈಗೆ ಹೊರಡಲಿದ್ದ ಏರ್ ಇಂಡಿಯಾ ವಿಮಾನದ ಟಿಕೆಟ್ ಮತ್ತು ಪಾಸ್ಪೋರ್ಟ್ ಪ್ರದರ್ಶಿಸಿ ಪ್ರಯಾಣಿಕರ ನಿರ್ಗಮನ ಪ್ರದೇಶಕ್ಕೆ ತೆರಳಿದ್ದರು.</p>.<p>ಸಂಜೆ 6.01ರ ವೇಳೆಗೆ ಕೆವಿನ್ ನಿರ್ಗಮನ ದ್ವಾರದಿಂದ ವಾಪಸು ಬರುತ್ತಿರುವಾಗ ಸಿಐಎಸ್ಎಫ್ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪತಿ ಮತ್ತು ಪತ್ನಿಯ ಪ್ರಯಾಣಕ್ಕೆ ಎರಡು ಟಿಕೆಟ್ ಖರೀದಿಸಲಾಗಿತ್ತು. ನಂತರ ಪತಿಯ ಪ್ರಯಾಣದ ಟಿಕೆಟ್ ರದ್ದುಗೊಳಿಸಲಾಗಿತ್ತು. ಆದರೆ, ರದ್ದುಗೊಂಡ ಸೀಟಿನ ಇ–ಟಿಕೆಟ್ ಕೆವಿನ್ ಬಳಿಯೇ ಉಳಿದಿತ್ತು. ಅದನ್ನು ಬಳಸಿಕೊಂಡು ಪತ್ನಿಗೆ ಸಹಾಯ ಮಾಡಲು ವಿಮಾನ ನಿಲ್ದಾಣದ ಒಳಕ್ಕೆ ಪ್ರವೇಶಿಸಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.</p>.<p>ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರ ವಶಕ್ಕೆ ನೀಡಿರುವ ಸಿಐಎಸ್ಎಫ್ ಅಧಿಕಾರಿಗಳು, ಈ ಸಂಬಂಧ ದೂರೊಂದನ್ನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>