<p><strong>ಜೋಹಾನ್ಸ್ಬರ್ಗ್:</strong> ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಅವರ ತತ್ವಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಸೈಕಲ್ ರ್ಯಾಲಿ ಆಯೋಜಿಸಲಾಗಿತ್ತು.</p>.<p>ಗಾಂಧಿ ನಡಿಗೆ ಸಮಿತಿ ಸಹಯೋಗದಲ್ಲಿ ಭಾರತದ ರಾಜತಾಂತ್ರಿಕ ಅಧಿಕಾರಿಗಳು ಈ ಕಾರ್ಯಕ್ರಮ ಆಯೋಜಿಸಿದ್ದರು.</p>.<p>ಭಾರತೀಯರು ಅಧಿಕ ಸಂಖ್ಯೆಯಲ್ಲಿರುವ ಲೆನಾಶಿಯಾದಿಂದ ಸೈಕಲ್ ರ್ಯಾಲಿಗೆ ಚಾಲನೆ ನೀಡಲಾಯಿತು.</p>.<p>‘ಗಾಂಧೀಜಿ ಅವರ ತತ್ವಗಳಾದ ಸತ್ಯ, ಅಹಿಂಸೆ ಕುರಿತು ಅರಿವು ಮೂಡಿಸುವ ಸಲುವಾಗಿ ರ್ಯಾಲಿ ಆಯೋಜಿಸಲಾಗಿದೆ. ದಕ್ಷಿಣ ಆಫ್ರಿಕಾಕ್ಕೆ ಭಾರತ ವಕೀಲರನ್ನು ಕಳುಹಿಸಿತು. ಆದರೆ ನಾವು ಮಹಾತ್ಮನನ್ನು ವಾಪಸ್ ಕಳುಹಿಸಿದೆವು. ಹಾಗಾಗಿ ಇದು ಕರ್ಮಭೂಮಿ’ ಎಂದು ಕಾನ್ಸುಲ್– ಜನರಲ್ ಕೆ.ಜಿ. ಶ್ರೀನಿವಾಸ್ಅವರು ತಿಳಿಸಿದರು.</p>.<p>‘ಗಾಂಧೀಜಿ ಸಮುದಾಯ ಅಭಿವೃದ್ಧಿಗೆ ಒತ್ತು ನೀಡಿದ್ದರು. ಅದೇ ಉದ್ದೇಶದಿಂದ ಸೈಕಲ್ ರ್ಯಾಲಿ ಆಯೋಜಿಸಲಾಗಿದೆ. ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರ ಸಂರಕ್ಷಣೆಗೆ ಮಹತ್ವ ನೀಡುವುದು ಇದರ ಉದ್ದೇಶ’ ಎಂದುಭಾರತೀಯ ಹೈಕಮಿಷನರ್ ಜಯದೀಪ್ ಸರ್ಕಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಹಾನ್ಸ್ಬರ್ಗ್:</strong> ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಅವರ ತತ್ವಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಸೈಕಲ್ ರ್ಯಾಲಿ ಆಯೋಜಿಸಲಾಗಿತ್ತು.</p>.<p>ಗಾಂಧಿ ನಡಿಗೆ ಸಮಿತಿ ಸಹಯೋಗದಲ್ಲಿ ಭಾರತದ ರಾಜತಾಂತ್ರಿಕ ಅಧಿಕಾರಿಗಳು ಈ ಕಾರ್ಯಕ್ರಮ ಆಯೋಜಿಸಿದ್ದರು.</p>.<p>ಭಾರತೀಯರು ಅಧಿಕ ಸಂಖ್ಯೆಯಲ್ಲಿರುವ ಲೆನಾಶಿಯಾದಿಂದ ಸೈಕಲ್ ರ್ಯಾಲಿಗೆ ಚಾಲನೆ ನೀಡಲಾಯಿತು.</p>.<p>‘ಗಾಂಧೀಜಿ ಅವರ ತತ್ವಗಳಾದ ಸತ್ಯ, ಅಹಿಂಸೆ ಕುರಿತು ಅರಿವು ಮೂಡಿಸುವ ಸಲುವಾಗಿ ರ್ಯಾಲಿ ಆಯೋಜಿಸಲಾಗಿದೆ. ದಕ್ಷಿಣ ಆಫ್ರಿಕಾಕ್ಕೆ ಭಾರತ ವಕೀಲರನ್ನು ಕಳುಹಿಸಿತು. ಆದರೆ ನಾವು ಮಹಾತ್ಮನನ್ನು ವಾಪಸ್ ಕಳುಹಿಸಿದೆವು. ಹಾಗಾಗಿ ಇದು ಕರ್ಮಭೂಮಿ’ ಎಂದು ಕಾನ್ಸುಲ್– ಜನರಲ್ ಕೆ.ಜಿ. ಶ್ರೀನಿವಾಸ್ಅವರು ತಿಳಿಸಿದರು.</p>.<p>‘ಗಾಂಧೀಜಿ ಸಮುದಾಯ ಅಭಿವೃದ್ಧಿಗೆ ಒತ್ತು ನೀಡಿದ್ದರು. ಅದೇ ಉದ್ದೇಶದಿಂದ ಸೈಕಲ್ ರ್ಯಾಲಿ ಆಯೋಜಿಸಲಾಗಿದೆ. ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರ ಸಂರಕ್ಷಣೆಗೆ ಮಹತ್ವ ನೀಡುವುದು ಇದರ ಉದ್ದೇಶ’ ಎಂದುಭಾರತೀಯ ಹೈಕಮಿಷನರ್ ಜಯದೀಪ್ ಸರ್ಕಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>