<p><strong>ಮೈಸೂರು:</strong> ಹೈದರಾಬಾದ್, ಗೋವಾ, ಕೊಚ್ಚಿ ನಗರಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಿಂದ ನೇರ ವಿಮಾನ ಹಾರಾಟ ಶುಕ್ರವಾರ (ಜುಲೈ 19) ಆರಂಭಗೊಳ್ಳುತ್ತಿದೆ.</p>.<p>ಬೆಂಗಳೂರು–ಮೈಸೂರು ನಡುವೆಯೂ ವಿಮಾನ ಹಾರಾಟದಲ್ಲಿನ ಸಮಯ ಬದಲಾವಣೆಗೊಂಡಿದ್ದು, ಉದ್ಯಮ ವಲಯ ಸೇರಿದಂತೆ ಪ್ರವಾಸೋದ್ಯಮಕ್ಕೆ ಇದು ಪೂರಕವಾಗಲಿದೆ.</p>.<p>ಅಲಯನ್ಸ್ ಏರ್ ಸಂಸ್ಥೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲಿದ್ದು, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಇನ್ಮುಂದೆ ಹೆಚ್ಚು ಚಟುವಟಿಕೆಯಿಂದ ಕೂಡಿರಲಿದೆ.</p>.<p>ವಿಶಾಖಪಟ್ಟಣಂ–ವಿಜಯವಾಡ–ಬೆಂಗಳೂರು–ಮೈಸೂರು ಮಾರ್ಗದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನ ಇದೀಗ, ಬೆಂಗಳೂರು–ಮೈಸೂರು ನಡುವಿನ ಹಾರಾಟಕ್ಕೆ ಸೀಮಿತವಾಗಿದೆ. ಸಮಯವೂ ಬದಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ ಎನ್ನಲಾಗಿದೆ.</p>.<p><strong>ಜುಲೈ 27ರಿಂದ ಮೆಮೊ</strong></p>.<p>ಬೆಂಗಳೂರು–ಮೈಸೂರು ನಡುವೆ ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿರುವ ಮೆಮೊ ರೈಲು ಜುಲೈ 27ರಿಂದ, ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲೂ ಸಂಚರಿಸಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.</p>.<p>ಮೆಮೊ ರೈಲು ಸಂಚಾರದ ವೇಳಾಪಟ್ಟಿಯಲ್ಲೂ ಭಾರಿ ಬದಲಾವಣೆ ನಡೆದಿದ್ದು, ಮಧ್ಯಮ ವರ್ಗದ ಜನರಿಗೆ ತುಂಬಾ ಅನುಕೂಲಕಾರಿಯಾಗಲಿದೆ ಎನ್ನಲಾಗಿದೆ.</p>.<p>‘ಕಾಚಿಗುಡ್ಡ ಸೂಪರ್ ಫಾಸ್ಟ್ ರೈಲು ಬೆಂಗಳೂರಿನಿಂದ ಮೈಸೂರಿಗೆ ವಿಸ್ತರಣೆಯಾದ ಬಳಿಕ ಹೈದರಾಬಾದ್ ಜತೆಗಿನ ವಹಿವಾಟು ಉದ್ಯಮ ವಲಯಕ್ಕೆ ಸುಲಲಿತವಾಗಿದೆ. ಇದೇ ರೀತಿ ಚೆನ್ನೈ ಎಕ್ಸ್ಪ್ರೆಸ್ ವಿಸ್ತರಣೆಯಾದ ಬಳಿಕ ಐಟಿ ಉದ್ಯೋಗಿಗಳಿಗೆ ವರವಾಗಿದೆ’ ಎಂದು ಸಂಸದ ಪ್ರತಾಪ್ ಸಿಂಹ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹೈದರಾಬಾದ್, ಗೋವಾ, ಕೊಚ್ಚಿ ನಗರಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಿಂದ ನೇರ ವಿಮಾನ ಹಾರಾಟ ಶುಕ್ರವಾರ (ಜುಲೈ 19) ಆರಂಭಗೊಳ್ಳುತ್ತಿದೆ.</p>.<p>ಬೆಂಗಳೂರು–ಮೈಸೂರು ನಡುವೆಯೂ ವಿಮಾನ ಹಾರಾಟದಲ್ಲಿನ ಸಮಯ ಬದಲಾವಣೆಗೊಂಡಿದ್ದು, ಉದ್ಯಮ ವಲಯ ಸೇರಿದಂತೆ ಪ್ರವಾಸೋದ್ಯಮಕ್ಕೆ ಇದು ಪೂರಕವಾಗಲಿದೆ.</p>.<p>ಅಲಯನ್ಸ್ ಏರ್ ಸಂಸ್ಥೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲಿದ್ದು, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಇನ್ಮುಂದೆ ಹೆಚ್ಚು ಚಟುವಟಿಕೆಯಿಂದ ಕೂಡಿರಲಿದೆ.</p>.<p>ವಿಶಾಖಪಟ್ಟಣಂ–ವಿಜಯವಾಡ–ಬೆಂಗಳೂರು–ಮೈಸೂರು ಮಾರ್ಗದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನ ಇದೀಗ, ಬೆಂಗಳೂರು–ಮೈಸೂರು ನಡುವಿನ ಹಾರಾಟಕ್ಕೆ ಸೀಮಿತವಾಗಿದೆ. ಸಮಯವೂ ಬದಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ ಎನ್ನಲಾಗಿದೆ.</p>.<p><strong>ಜುಲೈ 27ರಿಂದ ಮೆಮೊ</strong></p>.<p>ಬೆಂಗಳೂರು–ಮೈಸೂರು ನಡುವೆ ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿರುವ ಮೆಮೊ ರೈಲು ಜುಲೈ 27ರಿಂದ, ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲೂ ಸಂಚರಿಸಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.</p>.<p>ಮೆಮೊ ರೈಲು ಸಂಚಾರದ ವೇಳಾಪಟ್ಟಿಯಲ್ಲೂ ಭಾರಿ ಬದಲಾವಣೆ ನಡೆದಿದ್ದು, ಮಧ್ಯಮ ವರ್ಗದ ಜನರಿಗೆ ತುಂಬಾ ಅನುಕೂಲಕಾರಿಯಾಗಲಿದೆ ಎನ್ನಲಾಗಿದೆ.</p>.<p>‘ಕಾಚಿಗುಡ್ಡ ಸೂಪರ್ ಫಾಸ್ಟ್ ರೈಲು ಬೆಂಗಳೂರಿನಿಂದ ಮೈಸೂರಿಗೆ ವಿಸ್ತರಣೆಯಾದ ಬಳಿಕ ಹೈದರಾಬಾದ್ ಜತೆಗಿನ ವಹಿವಾಟು ಉದ್ಯಮ ವಲಯಕ್ಕೆ ಸುಲಲಿತವಾಗಿದೆ. ಇದೇ ರೀತಿ ಚೆನ್ನೈ ಎಕ್ಸ್ಪ್ರೆಸ್ ವಿಸ್ತರಣೆಯಾದ ಬಳಿಕ ಐಟಿ ಉದ್ಯೋಗಿಗಳಿಗೆ ವರವಾಗಿದೆ’ ಎಂದು ಸಂಸದ ಪ್ರತಾಪ್ ಸಿಂಹ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>