<p><strong>ಚಾಮರಾಜನಗರ: </strong>ಏಪ್ರಿಲ್ 29 ಮತ್ತು 30ರಂದು ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದ ಗಾಳಿ ಸಹಿತ ಮಳೆಗೆ 365 ಎಕರೆಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ನಾಶವಾಗಿದೆ. 8 ಎಕರೆಯಷ್ಟು ತರಕಾರಿ ಬೆಳೆಗಳಿಗೆ ಹಾನಿಗೀಡಾಗಿವೆ.</p>.<p>ತೋಟಗಾರಿಕಾ ಇಲಾಖೆಯು ಹಾನಿಗೀಡಾದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದು, ಒಟ್ಟು ₹5.88 ಕೋಟಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.</p>.<p>ಏಪ್ರಿಲ್ 29 ಮತ್ತು 30ರಂದು ಜಿಲ್ಲೆಯಾದ್ಯಂತ ಬೀಸಿದ ಬಿರುಗಾಳಿಗೆ ಚಾಮರಾಜನಗರ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾರ ಹಾನಿ ಸಂಭವಿಸಿತ್ತು.ಕಟಾವಿಗೆ ಸಿದ್ಧವಾಗಿದ್ದ ನೂರಾರು ಎಕರೆ ಬಾಳೆ ತೋಟ ನೆಲಕ್ಕುರುಳಿತ್ತು. ತೆಂಗಿನ ಮರಗಳೂ ಧರೆಗುರುಳಿದ್ದವು.</p>.<p>ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ, ಕೊತ್ತಲವಾಡಿ, ಕಟ್ನವಾಡಿ, ಕಿಲಗೆರೆ, ಅರಕಲವಾಡಿ, ವಿ.ಸಿ. ಹೊಸೂರು, ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಸೇರಿದಂತೆ ಹಲವು ಕಡೆಗಳಲ್ಲಿ ರೈತರು ಬೆಳೆದಿದ್ದ ಬಾಳೆ ನೆಲಕ್ಕಚ್ಚಿತ್ತು.</p>.<p>ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮೇ 2ರಂದು ಅಧಿಕಾರಿಗಳೊಂದಿಗೆ ಕಿಲಗೆರೆ, ಯಾನಗನಹಳ್ಳಿ, ಮಾದಲವಾಯಡಿಗ, ಬೇಲುಕುಪ್ಪೆ, ಮಾಯನಾಯಕನಪುರ ಗ್ರಾಮಗಳಿ ಬೆಳೆಹಾನಿ ಸಂಭವಿಸಿದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬೆಳೆ ಹಾನಿ ಪ್ರದೇಶದ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.</p>.<p>ರೈತರ ಅಹವಾಲು ಆಲಿಸಿದ್ದ ಕಾವೇರಿ ಅವರು, ‘ಸಮೀಕ್ಷೆ ನಡೆಸಿದ ಬಳಿಕ ಸೂಕ್ತ ಹಾಗೂ ಸಮರ್ಪಕ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದ್ದರು.</p>.<p>ಅದರಂತೆ ಸಮೀಕ್ಷೆ ನಡೆಸಿದ್ದ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾನಿಯ ವರದಿ ಸಿದ್ಧಪಡಿಸಿದ್ದಾರೆ.</p>.<p>‘ಜಿಲ್ಲೆಯಾದ್ಯಂತ ಬೆಳೆಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಪೂರ್ಣಗೊಂಡಿದೆ. ನಿಯಮಗಳ ಅನುಸಾರ ಪರಿಹಾರ ವಿತರಿಸಲಾಗುವುದು. ತಹಶೀಲ್ದಾರ್ ಮಟ್ಟದಲ್ಲಿ ಪರಿಹಾರ ವಿತರಣೆಯಾಗಲಿದೆ’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗಾಳಿಮಳೆಯಿಂದಾಗಿ ಬಾಳೆ ಬೆಳೆಗೆ ಹೆಚ್ಚು ಹಾನಿಯಾಗಿದೆ. ಸ್ವಲ್ಪ ಪ್ರಮಾಣದಲ್ಲಿ ತರಕಾರಿ ತೋಟವೂ ನಾಶವಾಗಿದೆ. ಕೆಲವು ತೆಂಗಿನಮರಗಳು ಧರೆಗುರುಳಿವೆ. ಕಬ್ಬು ಸೇರಿದಂತೆ ಬೇರೆ ಯಾವುದೇ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿಲ್ಲ’ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<p class="Subhead">ವೈಜ್ಞಾನಿಕ ಪರಿಹಾರಕ್ಕೆ ಆಗ್ರಹ:ಈ ಮಧ್ಯೆ, ಗಾಳಿ ಮಳೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಏಪ್ರಿಲ್ 29 ಮತ್ತು 30ರಂದು ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದ ಗಾಳಿ ಸಹಿತ ಮಳೆಗೆ 365 ಎಕರೆಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ನಾಶವಾಗಿದೆ. 8 ಎಕರೆಯಷ್ಟು ತರಕಾರಿ ಬೆಳೆಗಳಿಗೆ ಹಾನಿಗೀಡಾಗಿವೆ.</p>.<p>ತೋಟಗಾರಿಕಾ ಇಲಾಖೆಯು ಹಾನಿಗೀಡಾದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದು, ಒಟ್ಟು ₹5.88 ಕೋಟಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.</p>.<p>ಏಪ್ರಿಲ್ 29 ಮತ್ತು 30ರಂದು ಜಿಲ್ಲೆಯಾದ್ಯಂತ ಬೀಸಿದ ಬಿರುಗಾಳಿಗೆ ಚಾಮರಾಜನಗರ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾರ ಹಾನಿ ಸಂಭವಿಸಿತ್ತು.ಕಟಾವಿಗೆ ಸಿದ್ಧವಾಗಿದ್ದ ನೂರಾರು ಎಕರೆ ಬಾಳೆ ತೋಟ ನೆಲಕ್ಕುರುಳಿತ್ತು. ತೆಂಗಿನ ಮರಗಳೂ ಧರೆಗುರುಳಿದ್ದವು.</p>.<p>ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ, ಕೊತ್ತಲವಾಡಿ, ಕಟ್ನವಾಡಿ, ಕಿಲಗೆರೆ, ಅರಕಲವಾಡಿ, ವಿ.ಸಿ. ಹೊಸೂರು, ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಸೇರಿದಂತೆ ಹಲವು ಕಡೆಗಳಲ್ಲಿ ರೈತರು ಬೆಳೆದಿದ್ದ ಬಾಳೆ ನೆಲಕ್ಕಚ್ಚಿತ್ತು.</p>.<p>ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮೇ 2ರಂದು ಅಧಿಕಾರಿಗಳೊಂದಿಗೆ ಕಿಲಗೆರೆ, ಯಾನಗನಹಳ್ಳಿ, ಮಾದಲವಾಯಡಿಗ, ಬೇಲುಕುಪ್ಪೆ, ಮಾಯನಾಯಕನಪುರ ಗ್ರಾಮಗಳಿ ಬೆಳೆಹಾನಿ ಸಂಭವಿಸಿದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬೆಳೆ ಹಾನಿ ಪ್ರದೇಶದ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.</p>.<p>ರೈತರ ಅಹವಾಲು ಆಲಿಸಿದ್ದ ಕಾವೇರಿ ಅವರು, ‘ಸಮೀಕ್ಷೆ ನಡೆಸಿದ ಬಳಿಕ ಸೂಕ್ತ ಹಾಗೂ ಸಮರ್ಪಕ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದ್ದರು.</p>.<p>ಅದರಂತೆ ಸಮೀಕ್ಷೆ ನಡೆಸಿದ್ದ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾನಿಯ ವರದಿ ಸಿದ್ಧಪಡಿಸಿದ್ದಾರೆ.</p>.<p>‘ಜಿಲ್ಲೆಯಾದ್ಯಂತ ಬೆಳೆಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಪೂರ್ಣಗೊಂಡಿದೆ. ನಿಯಮಗಳ ಅನುಸಾರ ಪರಿಹಾರ ವಿತರಿಸಲಾಗುವುದು. ತಹಶೀಲ್ದಾರ್ ಮಟ್ಟದಲ್ಲಿ ಪರಿಹಾರ ವಿತರಣೆಯಾಗಲಿದೆ’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗಾಳಿಮಳೆಯಿಂದಾಗಿ ಬಾಳೆ ಬೆಳೆಗೆ ಹೆಚ್ಚು ಹಾನಿಯಾಗಿದೆ. ಸ್ವಲ್ಪ ಪ್ರಮಾಣದಲ್ಲಿ ತರಕಾರಿ ತೋಟವೂ ನಾಶವಾಗಿದೆ. ಕೆಲವು ತೆಂಗಿನಮರಗಳು ಧರೆಗುರುಳಿವೆ. ಕಬ್ಬು ಸೇರಿದಂತೆ ಬೇರೆ ಯಾವುದೇ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿಲ್ಲ’ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<p class="Subhead">ವೈಜ್ಞಾನಿಕ ಪರಿಹಾರಕ್ಕೆ ಆಗ್ರಹ:ಈ ಮಧ್ಯೆ, ಗಾಳಿ ಮಳೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>