<p>ಆನೇಕಲ್: ಬಮೂಲ್, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ ಹಮ್ಮಿಕೊಂಡಿರುವ ಕಾಲು ಬಾಯಿ ರೋಗ ತಡೆ ಲಸಿಕೆ ಅಭಿಯಾನಕ್ಕೆ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಚಾಲನೆ ನೀಡಿದರು.</p>.<p>ವಿಶ್ವ ಪಶುವೈದ್ಯಕೀಯ ದಿನದ ಪ್ರಯುಕ್ತ 2026-27ನೇ ಸಾಲಿನ ರಾಸು ವಿಮೆಗೆ ಕಾರ್ಯಕ್ರಮವದಲ್ಲಿ ಚಾಲನೆ ನೀಡಲಾಯಿತು.</p>.<p>ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿ, ಜಾನುವಾರು ರೋಗ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರತಿ 6 ತಿಂಗಳಿಗೊಮ್ಮೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದು ಕಡ್ಡಾಯ. ಜಾನುವಾರು ಆರೋಗ್ಯ ಕಾಪಾಡಬೇಕಾದುದ್ದು ಪಶುಪಾಲನ ಇಲಾಖೆಯ ಜವಾಬ್ದಾರಿಯಾಗಿದೆ. ರಾಸುಗಳನ್ನೇ ನಂಬಿರುವ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಡೆಯಲು ಈ ಲಸಿಕೆ ಅವಶ್ಯಕವಾಗಿದೆ ಎಂದು ತಿಳಿಸಿದರು.</p>.<p>ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗ ತಡೆಗೆ ಲಸಿಕೆ ಉಪಯುಕ್ತವಾಗಿದೆ. ಹಾಗಾಗಿ ರೈತರು ನಿರ್ಲಕ್ಷ್ಯ ವಹಿಸದೇ ಕಡ್ಡಾಯವಾಗಿ ಈ ಲಸಿಕೆ ಹಾಕಿಸಬೇಕು. ತಾಲ್ಲೂಕಿನಲ್ಲಿ 25 ಸಾವಿರ ರಾಸು ಇದ್ದು, ಪ್ರತಿಯೊಂದು ರಾಸಿಗೂ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದರು.</p>.<p>ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕರು ಶಿವರಾಮ ಪಾಟೀಲ್, ಪಶುವೈದ್ಯಾಧಿಕಾರಿ ಡಾ.ಧನಂಜಯ, ಬಮೂಲ್ ಶಿಥಲ ಕಚೇರಿಯ ಉಪವ್ಯವಸ್ಥಾಪಕ ಡಾ.ಸಿ.ಜಿ.ಸುರೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-15-1022857737</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಬಮೂಲ್, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ ಹಮ್ಮಿಕೊಂಡಿರುವ ಕಾಲು ಬಾಯಿ ರೋಗ ತಡೆ ಲಸಿಕೆ ಅಭಿಯಾನಕ್ಕೆ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಚಾಲನೆ ನೀಡಿದರು.</p>.<p>ವಿಶ್ವ ಪಶುವೈದ್ಯಕೀಯ ದಿನದ ಪ್ರಯುಕ್ತ 2026-27ನೇ ಸಾಲಿನ ರಾಸು ವಿಮೆಗೆ ಕಾರ್ಯಕ್ರಮವದಲ್ಲಿ ಚಾಲನೆ ನೀಡಲಾಯಿತು.</p>.<p>ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿ, ಜಾನುವಾರು ರೋಗ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರತಿ 6 ತಿಂಗಳಿಗೊಮ್ಮೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದು ಕಡ್ಡಾಯ. ಜಾನುವಾರು ಆರೋಗ್ಯ ಕಾಪಾಡಬೇಕಾದುದ್ದು ಪಶುಪಾಲನ ಇಲಾಖೆಯ ಜವಾಬ್ದಾರಿಯಾಗಿದೆ. ರಾಸುಗಳನ್ನೇ ನಂಬಿರುವ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಡೆಯಲು ಈ ಲಸಿಕೆ ಅವಶ್ಯಕವಾಗಿದೆ ಎಂದು ತಿಳಿಸಿದರು.</p>.<p>ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗ ತಡೆಗೆ ಲಸಿಕೆ ಉಪಯುಕ್ತವಾಗಿದೆ. ಹಾಗಾಗಿ ರೈತರು ನಿರ್ಲಕ್ಷ್ಯ ವಹಿಸದೇ ಕಡ್ಡಾಯವಾಗಿ ಈ ಲಸಿಕೆ ಹಾಕಿಸಬೇಕು. ತಾಲ್ಲೂಕಿನಲ್ಲಿ 25 ಸಾವಿರ ರಾಸು ಇದ್ದು, ಪ್ರತಿಯೊಂದು ರಾಸಿಗೂ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದರು.</p>.<p>ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕರು ಶಿವರಾಮ ಪಾಟೀಲ್, ಪಶುವೈದ್ಯಾಧಿಕಾರಿ ಡಾ.ಧನಂಜಯ, ಬಮೂಲ್ ಶಿಥಲ ಕಚೇರಿಯ ಉಪವ್ಯವಸ್ಥಾಪಕ ಡಾ.ಸಿ.ಜಿ.ಸುರೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-15-1022857737</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>