ಗಿರ್ ತಳಿಯ ಹಸು ವಂಶಾಭಿವೃದ್ಧಿಗಾಗಿ ಸಾಕಾಣಿಕೆ ಮಾಡುತ್ತಿದ್ದು, ಎಲ್ಲ ಕೆಲಸವನ್ನು ಪ್ರಕಾಶ್ ಅವರೆ ಮಾಡಿಕೊಳ್ಳುತ್ತಿದ್ದು, ಹೈನುಗಾರಿಕೆ ಬಗ್ಗೆ ಅವರಿಗೆ ಇರುವ ಕಾಳಜಿ ಇತರರಿಗೆ ಮಾದರಿ ಆಗಿದೆ. ಚೆನ್ನೈನಲ್ಲಿ ಹುಟ್ಟಿ ಬೆಳೆದು ಅಲ್ಲಿಯೇ ಅಟೋಮೊಬೈಲ್ ಡಿಪ್ಲೊಮಾ ವ್ಯಾಸಂಗ ಮಾಡಿದ್ದರು. ಬಳಿಕ ಪುಣೆಯ ಮಹೇಂದ್ರ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿ ₹ 65 ಸಾವಿರ ಸಂಬಳ ಪಡೆಯುತ್ತಿದ್ದರು.