<p>ಸಂತೇಮರಹಳ್ಳಿ: ಗ್ರಾಮೀಣ ಭಾಗದ ರೈತರಿಗೆ ಉತ್ತಮ ಆದಾಯದ ಮೂಲವಾಗಿರುವ ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.</p>.<p>ಸಮೀಪದ ಬಾಗಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ₹2 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಉಗ್ರಾಣ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೈತರು ಉತ್ತಮ ಗುಣಮಟ್ಟದ ಹಾಲನ್ನು ನೀಡಬೇಕು. ಚಾಮುಲ್ ವತಿಯಿಂದ ರೈತರಿಗೆ ₹2 ಸಹಾಯ ಧನ ನೀಡಲಾಗಿದೆ. ಮ್ಯಾಟ್ ಹಾಗೂ ಸ್ಟಾಪ್ ಕಟರ್ ನೀಡಲಾಗುವುದು. ರೈತರಿಗೆ ಉತ್ತಮವಾದ ಆದಾಯದ ಮೂಲವಾಗಿದೆ’ ಎಂದು ಹೇಳಿದರು.</p>.<p>ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ನಿರ್ದೇಶಕರಾದ ಬಸವರಾಜು, ಸದಾಶಿವಮೂರ್ತಿ, ನಾಮನಿರ್ದೇಶಕ ಕಮರವಾಡಿ ರೇವಣ್ಣ, ಡೇರಿ ಅಧ್ಯಕ್ಷ ಕರಗಶೆಟ್ಟಿ, ಡಾ.ಅಮರ್, ಇಒ ರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1819389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಗ್ರಾಮೀಣ ಭಾಗದ ರೈತರಿಗೆ ಉತ್ತಮ ಆದಾಯದ ಮೂಲವಾಗಿರುವ ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.</p>.<p>ಸಮೀಪದ ಬಾಗಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ₹2 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಉಗ್ರಾಣ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೈತರು ಉತ್ತಮ ಗುಣಮಟ್ಟದ ಹಾಲನ್ನು ನೀಡಬೇಕು. ಚಾಮುಲ್ ವತಿಯಿಂದ ರೈತರಿಗೆ ₹2 ಸಹಾಯ ಧನ ನೀಡಲಾಗಿದೆ. ಮ್ಯಾಟ್ ಹಾಗೂ ಸ್ಟಾಪ್ ಕಟರ್ ನೀಡಲಾಗುವುದು. ರೈತರಿಗೆ ಉತ್ತಮವಾದ ಆದಾಯದ ಮೂಲವಾಗಿದೆ’ ಎಂದು ಹೇಳಿದರು.</p>.<p>ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ನಿರ್ದೇಶಕರಾದ ಬಸವರಾಜು, ಸದಾಶಿವಮೂರ್ತಿ, ನಾಮನಿರ್ದೇಶಕ ಕಮರವಾಡಿ ರೇವಣ್ಣ, ಡೇರಿ ಅಧ್ಯಕ್ಷ ಕರಗಶೆಟ್ಟಿ, ಡಾ.ಅಮರ್, ಇಒ ರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1819389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>