<p>ಶಿರಸಿ: ‘ಹಾಲಿನ ಡೇರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಹಳ್ಳಿಗಳ ಕೃಷಿ ಮತ್ತು ಆರ್ಥಿಕ ವ್ಯವಸ್ಥೆ ಸುಧಾರಿಸಲು ಸಾಧ್ಯ’ ಎಂದು ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅಭಿಪ್ರಾಯಪಟ್ಟರು.</p>.<p>ನಗರದ ಶಿರಸಿ ಉಪವಿಭಾಗದಲ್ಲಿ ಮಂಗಳವಾರ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಕಲ್ಯಾಣ ಸಂಘದ ವತಿಯಿಂದ ವಿವಿಧ ಹಾಲು ಉತ್ಪಾದಕರ ಸಂಘಗಳ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>‘ಯುವಜನತೆಗೆ ಹಾಲು ಸೊಸೈಟಿಗಳ ಮಹತ್ವವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಗ್ರಾಮದ ಅಭಿವೃದ್ಧಿಯಲ್ಲಿ ತೊಡಗಿಸಬೇಕು’ ಎಂದು ಕರೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಮಂಜುಗುಣಿ ಹಾಲು ಉತ್ಪಾದಕರ ಸಹಕಾರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ₹1.8 ಲಕ್ಷದ ಚೆಕ್ ಅನ್ನು ಸಂಘದ ಅಧ್ಯಕ್ಷ ಪ್ರವೀಣ ಗೌಡ ತೆಪ್ಪಾರ ಅವರಿಗೆ ಹಸ್ತಾಂತರಿಸಲಾಯಿತು. ಅಲ್ಲದೆ, ಮೃತ ಸದಸ್ಯರ ವಾರಸುದಾರರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದ ಸಿಬ್ಬಂದಿ ಹಾಗೂ ಸದಸ್ಯರಿಗೆ ತಲಾ ₹10,000 ಮತ್ತು ₹5,000 ಮೊತ್ತದ ಸಹಾಯಧನ ವಿತರಿಸಲಾಯಿತು. ಜಾನುವಾರು ವಿಮಾ ಯೋಜನೆಯಡಿ ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ₹32,000 ದಿಂದ ₹57,000 ವರೆಗಿನ ವಿಮಾ ಮೊತ್ತದ ಚೆಕ್ಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಪ್ರಸಾದ ಬಿಜೂರ್, ಸಹಾಯಕ ವ್ಯವಸ್ಥಾಪಕ ವಿವೇಕ ಎಸ್.ಆರ್., ಗುರುದರ್ಶನ ಭಟ್, ವಿಸ್ತರಣಾಧಿಕಾರಿ ಮೌನೇಶ ಸೋನಾರ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಫಲಾನುಭವಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-20-29155729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಹಾಲಿನ ಡೇರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಹಳ್ಳಿಗಳ ಕೃಷಿ ಮತ್ತು ಆರ್ಥಿಕ ವ್ಯವಸ್ಥೆ ಸುಧಾರಿಸಲು ಸಾಧ್ಯ’ ಎಂದು ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅಭಿಪ್ರಾಯಪಟ್ಟರು.</p>.<p>ನಗರದ ಶಿರಸಿ ಉಪವಿಭಾಗದಲ್ಲಿ ಮಂಗಳವಾರ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಕಲ್ಯಾಣ ಸಂಘದ ವತಿಯಿಂದ ವಿವಿಧ ಹಾಲು ಉತ್ಪಾದಕರ ಸಂಘಗಳ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>‘ಯುವಜನತೆಗೆ ಹಾಲು ಸೊಸೈಟಿಗಳ ಮಹತ್ವವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಗ್ರಾಮದ ಅಭಿವೃದ್ಧಿಯಲ್ಲಿ ತೊಡಗಿಸಬೇಕು’ ಎಂದು ಕರೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಮಂಜುಗುಣಿ ಹಾಲು ಉತ್ಪಾದಕರ ಸಹಕಾರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ₹1.8 ಲಕ್ಷದ ಚೆಕ್ ಅನ್ನು ಸಂಘದ ಅಧ್ಯಕ್ಷ ಪ್ರವೀಣ ಗೌಡ ತೆಪ್ಪಾರ ಅವರಿಗೆ ಹಸ್ತಾಂತರಿಸಲಾಯಿತು. ಅಲ್ಲದೆ, ಮೃತ ಸದಸ್ಯರ ವಾರಸುದಾರರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದ ಸಿಬ್ಬಂದಿ ಹಾಗೂ ಸದಸ್ಯರಿಗೆ ತಲಾ ₹10,000 ಮತ್ತು ₹5,000 ಮೊತ್ತದ ಸಹಾಯಧನ ವಿತರಿಸಲಾಯಿತು. ಜಾನುವಾರು ವಿಮಾ ಯೋಜನೆಯಡಿ ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ₹32,000 ದಿಂದ ₹57,000 ವರೆಗಿನ ವಿಮಾ ಮೊತ್ತದ ಚೆಕ್ಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಪ್ರಸಾದ ಬಿಜೂರ್, ಸಹಾಯಕ ವ್ಯವಸ್ಥಾಪಕ ವಿವೇಕ ಎಸ್.ಆರ್., ಗುರುದರ್ಶನ ಭಟ್, ವಿಸ್ತರಣಾಧಿಕಾರಿ ಮೌನೇಶ ಸೋನಾರ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಫಲಾನುಭವಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-20-29155729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>