<p>ಚಿಂತಾಮಣಿ: ವಿಶ್ವ ಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು ವಿತರಿಸಲಾಯಿತು.</p>.<p>ಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣಬಾಬು ಮಾತನಾಡಿ, ‘ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿ ಭಾರತವು 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 15 ಒಕ್ಕೂಟಗಳು ಕಾರ್ಯಾರಂಭ ಮಾಡುತ್ತಿವೆ. ಲಕ್ಷಾಂತರ ರೈತರು ಉದ್ದಿಮೆಯಲ್ಲಿ ತೊಡಗಿಸಿಕೊಂಡು ಜೀವನ ಕಟ್ಟಿಕೊಂಡಿದ್ದಾರೆ’ ಎಂದು ಹೇಳಿದರು.</p>.<p>ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಮಹಿಳೆಯರು ಸಬಲೀಕರಣವಾಗುತ್ತಿದ್ದಾರೆ. ಸರ್ಕಾರವು ಲೀಟರ್ಗೆ ₹5 ಬೆಂಬಲ ಬೆಲೆ ನೀಡುತ್ತಿದೆ. ಪ್ರತಿ 15 ದಿನಗಳಿಗೊಮ್ಮೆ ಹಣ ಪಾವತಿಯ ಗ್ಯಾರಂಟಿ ಇರುವುದರಿಂದ ಹೆಚ್ಚಿನ ರೈತರು ಬೇರೆ ಕ್ಷೇತ್ರಗಳನ್ನು ತ್ಯಜಿಸಿ ಹಾಲು ಉತ್ಪಾದನೆಯತ್ತ ಮುಖ ಮಾಡುತ್ತಿದ್ದಾರೆ ಎಂದರು.</p>.<p>ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ದೊಡ್ದ ಒಕ್ಕೂಟಗಳಾಗಿವೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಜಿಲ್ಲೆಯಲ್ಲಿ 5 ಲಕ್ಷ ಲೀಟರ್, ತಾಲ್ಲೂಕಿನಲ್ಲಿ 1.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಇದಕ್ಕೆ ಮಹಿಳೆಯರ ಪರಿಶ್ರಮ, ಡೇರಿಗಳ ಆಡಳಿತ ಮಂಡಳಿಗಳು, ಸಿಬ್ಬಂದಿ, ಒಕ್ಕೂಟದ ಅಧಿಕಾರಿಗಳೇ ಕಾರಣ ಎಂದರು.</p>.<p>ಕೆಂಚಾರ್ಲಹಳ್ಳಿ ಕ್ಷೇತ್ರದ ನಿರ್ದೇಶಕ ಕೃಷ್ಣಾರೆಡ್ಡಿ, ಕೆ.ಎನ್. ಆವುಲಪ್ಪ ಮಾತನಾಡಿದರು. ನಿರ್ದೇಶಕಿ ಸುಮಾ ರವಿಚಂದ್ರನ್, ಚಿಂತಾಮಣಿ ಉಪ ವಿಭಾಗದ ವ್ಯವಸ್ಥಾಪಕ ಡಾ.ಮಹೇಶ್, ಪಶುಪ್ರಯೋಗಾಲಯದ ಡಾ. ಕಾವ್ಯ, ವಿಸ್ತರಣಾಧಿಕಾರಿಗಳು, ಡೇರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-212809310</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ವಿಶ್ವ ಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು ವಿತರಿಸಲಾಯಿತು.</p>.<p>ಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣಬಾಬು ಮಾತನಾಡಿ, ‘ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿ ಭಾರತವು 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 15 ಒಕ್ಕೂಟಗಳು ಕಾರ್ಯಾರಂಭ ಮಾಡುತ್ತಿವೆ. ಲಕ್ಷಾಂತರ ರೈತರು ಉದ್ದಿಮೆಯಲ್ಲಿ ತೊಡಗಿಸಿಕೊಂಡು ಜೀವನ ಕಟ್ಟಿಕೊಂಡಿದ್ದಾರೆ’ ಎಂದು ಹೇಳಿದರು.</p>.<p>ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಮಹಿಳೆಯರು ಸಬಲೀಕರಣವಾಗುತ್ತಿದ್ದಾರೆ. ಸರ್ಕಾರವು ಲೀಟರ್ಗೆ ₹5 ಬೆಂಬಲ ಬೆಲೆ ನೀಡುತ್ತಿದೆ. ಪ್ರತಿ 15 ದಿನಗಳಿಗೊಮ್ಮೆ ಹಣ ಪಾವತಿಯ ಗ್ಯಾರಂಟಿ ಇರುವುದರಿಂದ ಹೆಚ್ಚಿನ ರೈತರು ಬೇರೆ ಕ್ಷೇತ್ರಗಳನ್ನು ತ್ಯಜಿಸಿ ಹಾಲು ಉತ್ಪಾದನೆಯತ್ತ ಮುಖ ಮಾಡುತ್ತಿದ್ದಾರೆ ಎಂದರು.</p>.<p>ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ದೊಡ್ದ ಒಕ್ಕೂಟಗಳಾಗಿವೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಜಿಲ್ಲೆಯಲ್ಲಿ 5 ಲಕ್ಷ ಲೀಟರ್, ತಾಲ್ಲೂಕಿನಲ್ಲಿ 1.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಇದಕ್ಕೆ ಮಹಿಳೆಯರ ಪರಿಶ್ರಮ, ಡೇರಿಗಳ ಆಡಳಿತ ಮಂಡಳಿಗಳು, ಸಿಬ್ಬಂದಿ, ಒಕ್ಕೂಟದ ಅಧಿಕಾರಿಗಳೇ ಕಾರಣ ಎಂದರು.</p>.<p>ಕೆಂಚಾರ್ಲಹಳ್ಳಿ ಕ್ಷೇತ್ರದ ನಿರ್ದೇಶಕ ಕೃಷ್ಣಾರೆಡ್ಡಿ, ಕೆ.ಎನ್. ಆವುಲಪ್ಪ ಮಾತನಾಡಿದರು. ನಿರ್ದೇಶಕಿ ಸುಮಾ ರವಿಚಂದ್ರನ್, ಚಿಂತಾಮಣಿ ಉಪ ವಿಭಾಗದ ವ್ಯವಸ್ಥಾಪಕ ಡಾ.ಮಹೇಶ್, ಪಶುಪ್ರಯೋಗಾಲಯದ ಡಾ. ಕಾವ್ಯ, ವಿಸ್ತರಣಾಧಿಕಾರಿಗಳು, ಡೇರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-212809310</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>