<p>ವೇಮಗಲ್: ಹೋಬಳಿಯ ಕದರೀಪುರ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಸುಗಳಿಗೆ ಕಾಲು ಬಾಯಿ ಜ್ವರ ಹಾಗೂ ಚರ್ಮಗಂಟು ರೋಗದ ಲಸಿಕಾ ಅಭಿಯಾನ ನಡೆಯಿತು.</p>.<p>ಈ ವೇಳೆ ಪಶು ವೈದ್ಯಾಧಿಕಾರಿ ಡಾ.ನಿತ್ಯಾನಂದ ಮಾತನಾಡಿ, ಬೇಸಿಗೆಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದ್ದು, ಈ ವೇಳೆ ಜಾನುವಾರುಗಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವುದು ಅತ್ಯಗತ್ಯ ಎಂದರು.</p>.<p>ಬಿಸಿಲಿನ ತಾಪದಿಂದ ರಾಸುಗಳನ್ನು ರಕ್ಷಿಸಲು ತಂಪಾದ ಜಾಗದಲ್ಲಿ ಇರಿಸಬೇಕು. ಪೌಷ್ಟಿಕಾಂಶಯುಕ್ತ ಹಸಿ ಮೇವನ್ನು ಆಹಾರವಾಗಿ ನೀಡಬೇಕು. ಜೊತೆಗೆ ಹಸುಗಳಿಗೆ ವಿಮೆ ಮಾಡಿಸಿ ಎಂದು ಕಿವಿಮಾತು ಹೇಳಿದರು.</p>.<p>ಮದ್ದೇರಿ ಪಶು ಆಸ್ಪತ್ರೆಯ ವ್ಯಾಪ್ತಿಯು ಸುಮಾರು 20 ಹಳ್ಳಿಗಳನ್ನು ಒಳಗೊಂಡಿದ್ದು, ಎಲ್ಲಾ ಗ್ರಾಮಗಳಲ್ಲಿ ಲಸಿಕೆ ಹಾಕಲಾಗುವುದು. ಹಾಗಾಗಿ ಗ್ರಾಮದ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದರು.</p>.<p>ಆಸ್ಪತ್ರೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ, ಬೇಸಿಗೆ ಕಾಲದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಪಶು ವೈದ್ಯಕೀಯ ಪರಿವೀಕ್ಷಕ ಮಂಜುನಾಥ್, ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕ ಸುನೀಲ್, ಇಲಾಖೆಯ ಸಿಬ್ಬಂದಿ ವೆಂಕಟೇಶ್, ರಾಜು, ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-1121431112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಮಗಲ್: ಹೋಬಳಿಯ ಕದರೀಪುರ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಸುಗಳಿಗೆ ಕಾಲು ಬಾಯಿ ಜ್ವರ ಹಾಗೂ ಚರ್ಮಗಂಟು ರೋಗದ ಲಸಿಕಾ ಅಭಿಯಾನ ನಡೆಯಿತು.</p>.<p>ಈ ವೇಳೆ ಪಶು ವೈದ್ಯಾಧಿಕಾರಿ ಡಾ.ನಿತ್ಯಾನಂದ ಮಾತನಾಡಿ, ಬೇಸಿಗೆಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದ್ದು, ಈ ವೇಳೆ ಜಾನುವಾರುಗಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವುದು ಅತ್ಯಗತ್ಯ ಎಂದರು.</p>.<p>ಬಿಸಿಲಿನ ತಾಪದಿಂದ ರಾಸುಗಳನ್ನು ರಕ್ಷಿಸಲು ತಂಪಾದ ಜಾಗದಲ್ಲಿ ಇರಿಸಬೇಕು. ಪೌಷ್ಟಿಕಾಂಶಯುಕ್ತ ಹಸಿ ಮೇವನ್ನು ಆಹಾರವಾಗಿ ನೀಡಬೇಕು. ಜೊತೆಗೆ ಹಸುಗಳಿಗೆ ವಿಮೆ ಮಾಡಿಸಿ ಎಂದು ಕಿವಿಮಾತು ಹೇಳಿದರು.</p>.<p>ಮದ್ದೇರಿ ಪಶು ಆಸ್ಪತ್ರೆಯ ವ್ಯಾಪ್ತಿಯು ಸುಮಾರು 20 ಹಳ್ಳಿಗಳನ್ನು ಒಳಗೊಂಡಿದ್ದು, ಎಲ್ಲಾ ಗ್ರಾಮಗಳಲ್ಲಿ ಲಸಿಕೆ ಹಾಕಲಾಗುವುದು. ಹಾಗಾಗಿ ಗ್ರಾಮದ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದರು.</p>.<p>ಆಸ್ಪತ್ರೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ, ಬೇಸಿಗೆ ಕಾಲದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಪಶು ವೈದ್ಯಕೀಯ ಪರಿವೀಕ್ಷಕ ಮಂಜುನಾಥ್, ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕ ಸುನೀಲ್, ಇಲಾಖೆಯ ಸಿಬ್ಬಂದಿ ವೆಂಕಟೇಶ್, ರಾಜು, ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-1121431112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>