<p>ಮಾಗಡಿ: ರೈತರು ತಮ್ಮ ಸ್ವಂತ ಆರೋಗ್ಯದ ಕಡೆಗೆ ಗಮನ ಹರಿಸುವಷ್ಟೇ ಜಾಗರೂಕತೆಯಿಂದ ತಮ್ಮ ರಾಸುಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಕಾಲುಬಾಯಿ ರೋಗದಂತಹ ಮಾರಕ ಕಾಯಿಲೆ ತಡೆಗಟ್ಟಲು ಕಾಲ ಕಾಲಕ್ಕೆ ಲಸಿಕೆ ಹಾಕಿಸುವುದು ಅಗತ್ಯ ಎಂದು ಬನುಲ್ ನಿರ್ದೇಶಕ ಎಚ್.ಎನ್.ಅಶೋಕ್ ಹೇಳಿದರು.</p>.<p>ತಾಲ್ಲೂಕಿನ ತಟವಾಳು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾನುವಾರು ಕಾಲುಬಾಯಿ ರೋಗ ತಡೆಗಟ್ಟುವ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹೈನುಗಾರಿಕೆಯಿಂದ ಆರ್ಥಿಕ ಸಬಲೀಕರಣ ಸಾಧ್ಯ. ಗ್ರಾಮೀಣ ಭಾಗದ ಜನರು ಹಸು, ಎಮ್ಮೆ ಸೇರಿದಂತೆ ತಮ್ಮ ರಾಸುಗಳಿಗೆ ಪಶು ವೈದ್ಯರ ಸಲಹೆಯಂತೆ ಲಸಿಕೆ ಮತ್ತು ಚುಚ್ಚುಮದ್ದು ನೀಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ನಾಗಭೂಷಣ್ ಮಾತನಾಡಿದರು.</p>.<p>ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಕಾಂತರಾಜು, ಸೀಗೆಕುಪ್ಪೆ ಲೋಕೇಶ್, ಮಂಜುನಾಥ್, ಡೇರಿ ಅಧ್ಯಕ್ಷ ಶೇಖರ್, ಶಿವು ಗೊಲ್ಲರಹಟ್ಟಿ, ಕಾರ್ಯದರ್ಶಿ ಗಂಗಾಧರ್, ಅಣ್ಣಪ್ಪ, ಚಿತ್ತಯ್ಯ, ಪಶು ವೈದ್ಯಾಧಿಕಾರಿಗಳಾದ ಜಯಶ್ರೀ, ಬಮೂಲ್ ಪಶು ವೈದ್ಯಾಧಿಕಾರಿ ರೂಪಾ ಹಾಗೂ ವಿಸ್ತರಣಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-14-2128275051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ರೈತರು ತಮ್ಮ ಸ್ವಂತ ಆರೋಗ್ಯದ ಕಡೆಗೆ ಗಮನ ಹರಿಸುವಷ್ಟೇ ಜಾಗರೂಕತೆಯಿಂದ ತಮ್ಮ ರಾಸುಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಕಾಲುಬಾಯಿ ರೋಗದಂತಹ ಮಾರಕ ಕಾಯಿಲೆ ತಡೆಗಟ್ಟಲು ಕಾಲ ಕಾಲಕ್ಕೆ ಲಸಿಕೆ ಹಾಕಿಸುವುದು ಅಗತ್ಯ ಎಂದು ಬನುಲ್ ನಿರ್ದೇಶಕ ಎಚ್.ಎನ್.ಅಶೋಕ್ ಹೇಳಿದರು.</p>.<p>ತಾಲ್ಲೂಕಿನ ತಟವಾಳು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾನುವಾರು ಕಾಲುಬಾಯಿ ರೋಗ ತಡೆಗಟ್ಟುವ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹೈನುಗಾರಿಕೆಯಿಂದ ಆರ್ಥಿಕ ಸಬಲೀಕರಣ ಸಾಧ್ಯ. ಗ್ರಾಮೀಣ ಭಾಗದ ಜನರು ಹಸು, ಎಮ್ಮೆ ಸೇರಿದಂತೆ ತಮ್ಮ ರಾಸುಗಳಿಗೆ ಪಶು ವೈದ್ಯರ ಸಲಹೆಯಂತೆ ಲಸಿಕೆ ಮತ್ತು ಚುಚ್ಚುಮದ್ದು ನೀಡಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ನಾಗಭೂಷಣ್ ಮಾತನಾಡಿದರು.</p>.<p>ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಕಾಂತರಾಜು, ಸೀಗೆಕುಪ್ಪೆ ಲೋಕೇಶ್, ಮಂಜುನಾಥ್, ಡೇರಿ ಅಧ್ಯಕ್ಷ ಶೇಖರ್, ಶಿವು ಗೊಲ್ಲರಹಟ್ಟಿ, ಕಾರ್ಯದರ್ಶಿ ಗಂಗಾಧರ್, ಅಣ್ಣಪ್ಪ, ಚಿತ್ತಯ್ಯ, ಪಶು ವೈದ್ಯಾಧಿಕಾರಿಗಳಾದ ಜಯಶ್ರೀ, ಬಮೂಲ್ ಪಶು ವೈದ್ಯಾಧಿಕಾರಿ ರೂಪಾ ಹಾಗೂ ವಿಸ್ತರಣಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-14-2128275051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>