<p>ಮಾಗಡಿ: ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಬಗ್ಗೆ ಮಾಹಿತಿ ನೀಡಲು ಮಾಗಡಿ ತಾಲ್ಲೂಕಿನ ಆಯ್ದ 55 ರೈತರನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಈಚೆಗೆ ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು.</p>.<p>ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ರೈತರಿಗೆ ಪ್ರವಾಸ ಆಯೋಜಿಸಿದ್ದವು.</p>.<p>ಪ್ರವಾಸದ ಮೊದಲ ಭಾಗವಾಗಿ ಎಂ.ಎಸ್. ಪಾಳ್ಯ ಗ್ರಾಮದ ಪ್ರಗತಿಪರ ರೈತ ಸಿದ್ದಲಿಂಗಸ್ವಾಮಿ ಅವರ ಡೇರಿ ಫಾರ್ಮ್ಗೆ ಭೇಟಿ ನೀಡಲಾಯಿತು. 2019 ರಿಂದ ಸ್ವತಂತ್ರವಾಗಿ ಡೈರಿ ನಿರ್ವಹಿಸುತ್ತಿರುವ ಅವರು ಅಳವಡಿಸಿಕೊಂಡಿರುವ ಫ್ರೀ ಲಿವಿಂಗ್ ಪದ್ಧತಿ ರೈತರ ಗಮನ ಸೆಳೆಯಿತು.</p>.<p>ಸಿದ್ದಲಿಂಗಸ್ವಾಮಿ ಅವರನ್ನು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಮೂಲ್ ವತಿಯಿಂದ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-1476915786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಬಗ್ಗೆ ಮಾಹಿತಿ ನೀಡಲು ಮಾಗಡಿ ತಾಲ್ಲೂಕಿನ ಆಯ್ದ 55 ರೈತರನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಈಚೆಗೆ ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು.</p>.<p>ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ರೈತರಿಗೆ ಪ್ರವಾಸ ಆಯೋಜಿಸಿದ್ದವು.</p>.<p>ಪ್ರವಾಸದ ಮೊದಲ ಭಾಗವಾಗಿ ಎಂ.ಎಸ್. ಪಾಳ್ಯ ಗ್ರಾಮದ ಪ್ರಗತಿಪರ ರೈತ ಸಿದ್ದಲಿಂಗಸ್ವಾಮಿ ಅವರ ಡೇರಿ ಫಾರ್ಮ್ಗೆ ಭೇಟಿ ನೀಡಲಾಯಿತು. 2019 ರಿಂದ ಸ್ವತಂತ್ರವಾಗಿ ಡೈರಿ ನಿರ್ವಹಿಸುತ್ತಿರುವ ಅವರು ಅಳವಡಿಸಿಕೊಂಡಿರುವ ಫ್ರೀ ಲಿವಿಂಗ್ ಪದ್ಧತಿ ರೈತರ ಗಮನ ಸೆಳೆಯಿತು.</p>.<p>ಸಿದ್ದಲಿಂಗಸ್ವಾಮಿ ಅವರನ್ನು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಮೂಲ್ ವತಿಯಿಂದ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-1476915786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>