<p>ನಂಜನಗೂಡು: ‘ರೈತರು ಕೃಷಿ ಚಟುವಟಿಕೆಯ ಜೊತೆಗೆ ಹೈನುಗಾರಿಕೆ ಮಾಡಬೇಕು. ಇದರಿಂದ ಆದಾಯದೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು’ ಎಂದು ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಚ್.ಮೋಹನ್ ಹೇಳಿದರು.</p>.<p>ನಗರದ ಗೌರಿಘಟ್ಟದ ಬೀದಿಯ ಸಮುದಾಯ ಭವನದಲ್ಲಿ ಪಶುಸಂಗೋಪನೆ ಇಲಾಖೆ ಸಹಯೋಗದೊಂದಿಗೆ ಗಂಗಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕುರಿ ಹಸು ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಆದಾಯ ಹೆಚ್ಚಿಸುವ ಸಲುವಾಗಿ ರೈತರಿಗೆ ಕುರಿ- ಮೇಕೆ ಸಾಕಣೆ, ಕೋಳಿ ಸಾಕಣೆ, ಹಾಗೂ ಹಾಲು ಉತ್ಪಾದನೆ, ಡೇರಿ ಫಾರ್ಮಿಂಗ್ ಬಗ್ಗೆ ಉಚಿತ ತರಬೇತಿ ನೀಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿವೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗಂಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಜ್ಕಾಮಯ್ಯ, ಕಾರ್ಯದರ್ಶಿ ದಿವ್ಯಶ್ರೀ, ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕಿ ಎಚ್.ಎಸ್.ತ್ರಿವೇಣಿ, ಎಸ್ಬಿಐ ಮುಖ್ಯ ವ್ಯವಸ್ಥಾಪಕ ಮನೋಜ್ ಕುಮಾರ್, ತಾಲ್ಲೂಕು ನಾಯಕ ಸಮುದಾಯ ಅಧ್ಯಕ್ಷ ಕೆ.ನಾಗರಾಜು, ಹನುಮಂತನಾಯಕ, ಶಶಾಂಕ್, ಮಂಜುಳಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-38-1588163187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ರೈತರು ಕೃಷಿ ಚಟುವಟಿಕೆಯ ಜೊತೆಗೆ ಹೈನುಗಾರಿಕೆ ಮಾಡಬೇಕು. ಇದರಿಂದ ಆದಾಯದೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು’ ಎಂದು ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಚ್.ಮೋಹನ್ ಹೇಳಿದರು.</p>.<p>ನಗರದ ಗೌರಿಘಟ್ಟದ ಬೀದಿಯ ಸಮುದಾಯ ಭವನದಲ್ಲಿ ಪಶುಸಂಗೋಪನೆ ಇಲಾಖೆ ಸಹಯೋಗದೊಂದಿಗೆ ಗಂಗಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕುರಿ ಹಸು ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಆದಾಯ ಹೆಚ್ಚಿಸುವ ಸಲುವಾಗಿ ರೈತರಿಗೆ ಕುರಿ- ಮೇಕೆ ಸಾಕಣೆ, ಕೋಳಿ ಸಾಕಣೆ, ಹಾಗೂ ಹಾಲು ಉತ್ಪಾದನೆ, ಡೇರಿ ಫಾರ್ಮಿಂಗ್ ಬಗ್ಗೆ ಉಚಿತ ತರಬೇತಿ ನೀಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿವೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗಂಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಜ್ಕಾಮಯ್ಯ, ಕಾರ್ಯದರ್ಶಿ ದಿವ್ಯಶ್ರೀ, ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕಿ ಎಚ್.ಎಸ್.ತ್ರಿವೇಣಿ, ಎಸ್ಬಿಐ ಮುಖ್ಯ ವ್ಯವಸ್ಥಾಪಕ ಮನೋಜ್ ಕುಮಾರ್, ತಾಲ್ಲೂಕು ನಾಯಕ ಸಮುದಾಯ ಅಧ್ಯಕ್ಷ ಕೆ.ನಾಗರಾಜು, ಹನುಮಂತನಾಯಕ, ಶಶಾಂಕ್, ಮಂಜುಳಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-38-1588163187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>