<p>ಕೊರಟಗೆರೆ: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ಒಕ್ಕೂಟ, ಪಶುಪಾಲನ ಇಲಾಖೆಯಿಂದ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ರೈತರಿಗಾಗಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ಮಿಶ್ರ ತಳಿರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಹೆಣ್ಣು ಕರು ಪ್ರದರ್ಶನ ರೈತರ ಶ್ರಮ, ಪಶುಸಂಗೋಪನೆ ಮಹತ್ವ ಸಾರುವ ವೇದಿಕೆಯಾಗಿ ಮಾರ್ಪಟ್ಟಿತ್ತು.</p>.<p>ರೈತರಿಗೆ ಸಂಜೆ ಹಾಗೂ ಬೆಳಿಗ್ಗೆ ಹಾಲು ಕರೆಯುವ ಸ್ಪರ್ಧೆ ನಡೆಸಲಾಯಿತು. 50ಕ್ಕೂ ಹೆಚ್ಚಿನ ರೈತರು ಹಸುಗಳೊಂದಿಗೆ ಪಾಲ್ಗೊಂಡಿದ್ದರು. ಹಾಲಿನ ಪ್ರಮಾಣ, ಗುಣಮಟ್ಟ (ಫ್ಯಾಟ್ ಅಂಶ) ಮತ್ತು ಹಸುಗಳ ಆರೋಗ್ಯವನ್ನು ಕೂಡ ತೀರ್ಪುಗಾರರು ಪರಿಗಣಿಸಿದರು. ಹಾಲು ಕರೆಯುವ ಕೌಶಲ ನೋಡಲು ಜನ ಮುಗಿಬಿದ್ದರು.</p>.<p>ಮೊದಲನೇ ಬಹುಮಾನ ಬೈಚೇನಹಳ್ಳಿ ಅನುಸೂಯಮ್ಮ ನಟರಾಜು ಅವರಿಗೆ ₹30ಸಾವಿರ, ಪಾರಿತೋಷಕ ಹಾಗೂ ಎರಡನೇ ಬಹುಮಾನ ಪಾತಗನಹಳ್ಳಿ ಗ್ರಾಮದ ರಾಮಕ್ಕ ರಂಗಸ್ವಾಮಿ ₹20 ಸಾವಿರ, ಪಾತಗಾನಹಳ್ಳಿ ರಾಜೇಶ್ವರಿ ಶಿವಕುಮಾರ್ ಅವರಿಗೆ ತೃತೀಯ ಬಹುಮಾನ ₹10 ಸಾವಿರ ನೀಡಲಾಯಿತು.</p>.<p>ಮಠದ ಪೀಠಾಧ್ಯಕ್ಷ ಹನುಮಂತನಾಥ ಸ್ವಾಮೀಜಿ, ತುಮಕೂರು ಹಾಲು ಒಕ್ಕೂಟದ ತಾಲ್ಲೂಕು ನಿರ್ದೇಶಕ ಸಿದ್ದಗಂಗಯ್ಯ, ಮಧುಗಿರಿ ನಾಗೇಶ್ ಬಾಬು, ಚಂದ್ರಶೇಖರ್ ರೆಡ್ಡಿ, ಕಾಮರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಸುಧಾಕರ್, ಶ್ರೀನಿವಾಸ್, ದೀಕ್ಷಿತ್, ಪುಷ್ಪಲತಾ, ಬಶೀರಾ, ವೈ.ವಿ ಚಂದ್ರಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-641621153</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊರಟಗೆರೆ: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ಒಕ್ಕೂಟ, ಪಶುಪಾಲನ ಇಲಾಖೆಯಿಂದ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ರೈತರಿಗಾಗಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ಮಿಶ್ರ ತಳಿರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಹೆಣ್ಣು ಕರು ಪ್ರದರ್ಶನ ರೈತರ ಶ್ರಮ, ಪಶುಸಂಗೋಪನೆ ಮಹತ್ವ ಸಾರುವ ವೇದಿಕೆಯಾಗಿ ಮಾರ್ಪಟ್ಟಿತ್ತು.</p>.<p>ರೈತರಿಗೆ ಸಂಜೆ ಹಾಗೂ ಬೆಳಿಗ್ಗೆ ಹಾಲು ಕರೆಯುವ ಸ್ಪರ್ಧೆ ನಡೆಸಲಾಯಿತು. 50ಕ್ಕೂ ಹೆಚ್ಚಿನ ರೈತರು ಹಸುಗಳೊಂದಿಗೆ ಪಾಲ್ಗೊಂಡಿದ್ದರು. ಹಾಲಿನ ಪ್ರಮಾಣ, ಗುಣಮಟ್ಟ (ಫ್ಯಾಟ್ ಅಂಶ) ಮತ್ತು ಹಸುಗಳ ಆರೋಗ್ಯವನ್ನು ಕೂಡ ತೀರ್ಪುಗಾರರು ಪರಿಗಣಿಸಿದರು. ಹಾಲು ಕರೆಯುವ ಕೌಶಲ ನೋಡಲು ಜನ ಮುಗಿಬಿದ್ದರು.</p>.<p>ಮೊದಲನೇ ಬಹುಮಾನ ಬೈಚೇನಹಳ್ಳಿ ಅನುಸೂಯಮ್ಮ ನಟರಾಜು ಅವರಿಗೆ ₹30ಸಾವಿರ, ಪಾರಿತೋಷಕ ಹಾಗೂ ಎರಡನೇ ಬಹುಮಾನ ಪಾತಗನಹಳ್ಳಿ ಗ್ರಾಮದ ರಾಮಕ್ಕ ರಂಗಸ್ವಾಮಿ ₹20 ಸಾವಿರ, ಪಾತಗಾನಹಳ್ಳಿ ರಾಜೇಶ್ವರಿ ಶಿವಕುಮಾರ್ ಅವರಿಗೆ ತೃತೀಯ ಬಹುಮಾನ ₹10 ಸಾವಿರ ನೀಡಲಾಯಿತು.</p>.<p>ಮಠದ ಪೀಠಾಧ್ಯಕ್ಷ ಹನುಮಂತನಾಥ ಸ್ವಾಮೀಜಿ, ತುಮಕೂರು ಹಾಲು ಒಕ್ಕೂಟದ ತಾಲ್ಲೂಕು ನಿರ್ದೇಶಕ ಸಿದ್ದಗಂಗಯ್ಯ, ಮಧುಗಿರಿ ನಾಗೇಶ್ ಬಾಬು, ಚಂದ್ರಶೇಖರ್ ರೆಡ್ಡಿ, ಕಾಮರಾಜು, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಸುಧಾಕರ್, ಶ್ರೀನಿವಾಸ್, ದೀಕ್ಷಿತ್, ಪುಷ್ಪಲತಾ, ಬಶೀರಾ, ವೈ.ವಿ ಚಂದ್ರಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-641621153</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>