<p>ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಣಿಯನಪುರ ಕಾಲೋನಿಯ ಮಹದೇಶ್ವರ ದೇವಸ್ಥಾನ ಬಳಿಯ ಕೆರೆಯಲ್ಲಿ ಸೀಳು ನಾಯಿಗಳ ಗುಂಪು ಬಿರು ಬಿಸಿಲಿನಲ್ಲಿ ಮೈ ತಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p>.<p>ಕಾಲೋನಿಯ ಕೆರೆಯಲ್ಲಿ ಆಗಾಗ್ಗೆ ಸೀಳು ನಾಯಿಗಳ ಗುಂಪು ಗ್ರಾಮಸ್ಥರಿಗೆ ಕಾಣಿಸಿಕೊಳ್ಳುತ್ತಿವೆ. ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯುತ್ತಿದ್ದ ಜಿಂಕೆಯನ್ನು ಬೇಟೆಯಾಡಿ ಭಕ್ಷಿಸಿದ್ದ ಸೀಳು ನಾಯಿಗಳು ಪ್ರತಿನಿತ್ಯ ಮಧ್ಯಾಹ್ನದ ವೇಳೆಗೆ ಕೆರೆಯ ಬಳಿ ಜಮಾಯಿಸುತ್ತವೆ ಎನ್ನುತ್ತಾರೆ ಗ್ರಾಮಸ್ಥರು.</p>.<p>ಇತ್ತೀಚಿಗೆ ಸುರಿದ ಮಳೆಯಿಂದ ಬಂಡೀಪುರ ಕಾನನವು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು, ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಹುಲಿ, ಚಿರತೆ, ಕರಡಿ, ಆನೆಗಳು ದರ್ಶನ ನೀಡುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-37-70122723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಣಿಯನಪುರ ಕಾಲೋನಿಯ ಮಹದೇಶ್ವರ ದೇವಸ್ಥಾನ ಬಳಿಯ ಕೆರೆಯಲ್ಲಿ ಸೀಳು ನಾಯಿಗಳ ಗುಂಪು ಬಿರು ಬಿಸಿಲಿನಲ್ಲಿ ಮೈ ತಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p>.<p>ಕಾಲೋನಿಯ ಕೆರೆಯಲ್ಲಿ ಆಗಾಗ್ಗೆ ಸೀಳು ನಾಯಿಗಳ ಗುಂಪು ಗ್ರಾಮಸ್ಥರಿಗೆ ಕಾಣಿಸಿಕೊಳ್ಳುತ್ತಿವೆ. ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯುತ್ತಿದ್ದ ಜಿಂಕೆಯನ್ನು ಬೇಟೆಯಾಡಿ ಭಕ್ಷಿಸಿದ್ದ ಸೀಳು ನಾಯಿಗಳು ಪ್ರತಿನಿತ್ಯ ಮಧ್ಯಾಹ್ನದ ವೇಳೆಗೆ ಕೆರೆಯ ಬಳಿ ಜಮಾಯಿಸುತ್ತವೆ ಎನ್ನುತ್ತಾರೆ ಗ್ರಾಮಸ್ಥರು.</p>.<p>ಇತ್ತೀಚಿಗೆ ಸುರಿದ ಮಳೆಯಿಂದ ಬಂಡೀಪುರ ಕಾನನವು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು, ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಹುಲಿ, ಚಿರತೆ, ಕರಡಿ, ಆನೆಗಳು ದರ್ಶನ ನೀಡುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-37-70122723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>