2014ರಲ್ಲಿ ನರೇಂದ್ರ ಮೋದಿ ಅವರು ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ನಡೆದ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಅಡಿಕೆಗೆ ಗೌರವ ತಂದುಕೊಡಲಾಗುವುದು, ಅಡಿಕೆ ಬೆಳೆಗಾರರು ಹಿತ ಕಾಪಾಡಲಾಗುವುದು ಎಂದು ಭರವಸೆ ನೀಡಿದ್ದರು. 2017–18ರ ಸಂಸತ್ ಅಧಿವೇಶನದಲ್ಲಿ ಆರೋಗ್ಯ ಸಚಿವರು ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್ ಬರುತ್ತದೆ ಎಂದು ಹೇಳಿಕೆ ನೀಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.