ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಅಧಿಕಾರಿ ಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ 3 ಜಿಲ್ಲೆಗಳಲ್ಲಿ ಅಕಾಲಿಕ ಮಳೆ, ನವೆಂಬರ್ ತಿಂಗಳಿ ನಲ್ಲಿ ತಲೆದೋರಿದ ಒಣ, ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಉಲ್ಬಣಗೊಂಡಿತ್ತು. ಸಂಕೀರ್ಣ ನೆಟೆ ರೋಗಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಸೇರಿ ಒಟ್ಟು 2.2278 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುವುದು ವರದಿಯಾಗಿದೆ.