ಮೈಸೂರು ತಾಲ್ಲೂಕು ಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮಗಳ ರೈತರು ಕೃಷಿಗೆಂದು ಕೊಳವೆಬಾವಿಗಳನ್ನು ಕೊರೆಸಿ ಮೆಣಸಿನಕಾಯಿ, ಬದನೆಕಾಯಿ, ಟೊಮೊಟೊ, ಹಿರೇಕಾಯಿ, ಬೀನ್ಸ್, ಕುಂಬಳಕಾಯಿ, ಹಾಗಲಕಾಯಿ ಮುಂತಾದ ತರಕಾರಿ ಬೆಳೆಯುತ್ತಿದ್ದರು. ಲಾಕ್ಡೌನ್ನಿಂದಾಗಿ ಸೂಕ್ತ ಮಾರುಕಟ್ಟೆ ದೊರೆಯದ ಕಾರಣ ಅಪಾರ ನಷ್ಟ ಸಂಭವಿಸಿದ್ದರಿಂದ ಈಗ ಪಪ್ಪಾಯ, ಮಾವು, ಸಪೋಟದಂತಹ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಮುಂದಾಗಿದ್ದಾರೆ.