<p><strong>ಬೆಂಗಳೂರು: </strong>ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯ 2019ನೇ ಸಾಲಿನ ‘ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ‘ಗಾಗಿ ಲೇಖಕರಿಂದ ಅರ್ಜಿ ಆಹ್ವಾನಿಸಿದೆ.</p>.<p>ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.2019ರ ಜನವರಿಯಿಂದ ಡಿಸೆಂಬರ್ ತಿಂಗಳ ಒಳಗೆ ಪ್ರಕಟವಾಗಿರುವ ಕನ್ನಡದ ಕೃಷಿ ಪುಸ್ತಕಗಳ ತಲಾ ಮೂರು ಪ್ರತಿಯನ್ನು ಕಳುಹಿಸಬೇಕು.</p>.<p><strong>ನಿಯಮ ಮತ್ತು ನಿಬಂಧನೆಗಳು</strong></p>.<p>ಪುಸ್ತಕವು ಸ್ವಂತ ರಚನೆಯಾಗಿರಬೇಕು. ಅನುವಾದಿತ ಕೃತಿಯಾಗಿರಬಾರದು. ಇತರ ಲೇಖಕರ ಬರಹಗಳ ಸಂಪಾದಿತ ಕೃತಿಯಾಗಿರಬಾರದು. ಪುಸ್ತಕವು ಮೊದಲ ಪ್ರಕಟಣೆ/ಆವೃತ್ತಿಯಾಗಿರಬೇಕು. ಮರುಮುದ್ರಿತ/ಪರಿಷ್ಕರಿಸಿ ಮರುಮುದ್ರಿಸಿದ ಪುಸ್ತಕವಾಗಿರಬಾರದು. ಪುಸ್ತಕವು ಕನಿಷ್ಠ 1/8 ಕ್ರೌನ್ ಅಳತೆಯ (ತಾಂತ್ರಿಕ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 50 ಪುಟಗಳಷ್ಟಾದರೂ ಇರಬೇಕು. ಈ ಪ್ರಶಸ್ತಿ ನೀಡುವುದು ಲೇಖಕರಿಗೆ ಮಾತ್ರ. ಪ್ರಕಾಶಕರಿಗೆ / ಮುದ್ರಕರಿಗೆ ಅಲ್ಲ.</p>.<p>ಪ್ರಶಸ್ತಿಗಾಗಿ ಪುಸ್ತಕ ಕಳುಹಿಸಲು ಕೊನೆಯ ದಿನ– ಜುಲೈ 31, 2020.ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560 065.</p>.<p>ಪುಸ್ತಕ ಪ್ರಶಸ್ತಿ ಅರ್ಜಿ ನಮೂನೆಯನ್ನು uasbangalore.edu.in ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆkannada.uas@gmail.com ಮೇಲ್ ವಿಳಾಸಕ್ಕೆ ಬರೆದು ಮಾಹಿತಿ ತಿಳಿಯಬಹುದು. ದೂರವಾಣಿ ಸಂಖ್ಯೆ: 080-23330239ಕ್ಕೆ ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯ 2019ನೇ ಸಾಲಿನ ‘ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ‘ಗಾಗಿ ಲೇಖಕರಿಂದ ಅರ್ಜಿ ಆಹ್ವಾನಿಸಿದೆ.</p>.<p>ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.2019ರ ಜನವರಿಯಿಂದ ಡಿಸೆಂಬರ್ ತಿಂಗಳ ಒಳಗೆ ಪ್ರಕಟವಾಗಿರುವ ಕನ್ನಡದ ಕೃಷಿ ಪುಸ್ತಕಗಳ ತಲಾ ಮೂರು ಪ್ರತಿಯನ್ನು ಕಳುಹಿಸಬೇಕು.</p>.<p><strong>ನಿಯಮ ಮತ್ತು ನಿಬಂಧನೆಗಳು</strong></p>.<p>ಪುಸ್ತಕವು ಸ್ವಂತ ರಚನೆಯಾಗಿರಬೇಕು. ಅನುವಾದಿತ ಕೃತಿಯಾಗಿರಬಾರದು. ಇತರ ಲೇಖಕರ ಬರಹಗಳ ಸಂಪಾದಿತ ಕೃತಿಯಾಗಿರಬಾರದು. ಪುಸ್ತಕವು ಮೊದಲ ಪ್ರಕಟಣೆ/ಆವೃತ್ತಿಯಾಗಿರಬೇಕು. ಮರುಮುದ್ರಿತ/ಪರಿಷ್ಕರಿಸಿ ಮರುಮುದ್ರಿಸಿದ ಪುಸ್ತಕವಾಗಿರಬಾರದು. ಪುಸ್ತಕವು ಕನಿಷ್ಠ 1/8 ಕ್ರೌನ್ ಅಳತೆಯ (ತಾಂತ್ರಿಕ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 50 ಪುಟಗಳಷ್ಟಾದರೂ ಇರಬೇಕು. ಈ ಪ್ರಶಸ್ತಿ ನೀಡುವುದು ಲೇಖಕರಿಗೆ ಮಾತ್ರ. ಪ್ರಕಾಶಕರಿಗೆ / ಮುದ್ರಕರಿಗೆ ಅಲ್ಲ.</p>.<p>ಪ್ರಶಸ್ತಿಗಾಗಿ ಪುಸ್ತಕ ಕಳುಹಿಸಲು ಕೊನೆಯ ದಿನ– ಜುಲೈ 31, 2020.ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560 065.</p>.<p>ಪುಸ್ತಕ ಪ್ರಶಸ್ತಿ ಅರ್ಜಿ ನಮೂನೆಯನ್ನು uasbangalore.edu.in ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆkannada.uas@gmail.com ಮೇಲ್ ವಿಳಾಸಕ್ಕೆ ಬರೆದು ಮಾಹಿತಿ ತಿಳಿಯಬಹುದು. ದೂರವಾಣಿ ಸಂಖ್ಯೆ: 080-23330239ಕ್ಕೆ ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>