<p>ಬಳ್ಳಾರಿ: ‘ಉತ್ತಮ ಬೀಜ, ಗೊಬ್ಬರ, ನೀರು ಅಲಭ್ಯತೆ, ಬೆಳೆಗೆ ಸಿಗದ ಬೆಲೆ, ವಾಣಿಜ್ಯೀಕರಣ ನೀತಿಗಳಿಂದಾಗಿ ಈ ದೇಶಕ್ಕೆ ಅನ್ನ ನೀಡುವ ರೈತ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾನೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಮಾಧವರೆಡ್ಡಿ ಕರೂರು ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ ) ಕಾಲೇಜಿನ ಸಭಾಂಗಣದಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ‘ಭಾರತದ ಕೃಷಿ ಬಿಕ್ಕಟ್ಟು’ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಅಭಿವೃದ್ಧಿಯ ಹೆಸರಿನಲ್ಲಿ ಬೃಹತ್ ಕಾರ್ಖಾನೆ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ನೀಡಿ ಕೃಷಿ ಭೂಮಿಯನ್ನು ಬಳಸಿಕೊಂಡು, ಭೂಮಿ ಕಳೆದುಕೊಂಡವರಿಗೆ ಉದ್ಯೋಗದ ಆಮಿಷೆಯನ್ನು ಒಡ್ಡಿ ಆಹಾರದ ಸಮಸ್ಯೆಗೆ ದೇಶವನ್ನು ಒಳಗು ಮಾಡುತ್ತಿರುವುದು ಕಳವಳಕಾರಿ ಸಂಗತಿ’ ಎಂದು ವಿಶ್ಲೇಷಿಸಿದರು.</p>.<p>ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ ‘ಹೊಸ ತಲೆಮಾರಿನವರು ಸರ್ಕಾರಿ ಹುದ್ದೆಯನ್ನು ನೆಚ್ಚಿಕೊಳ್ಳದೆ ತಾವು ಪಡೆದುಕೊಂಡ ಜ್ಞಾನವನ್ನು ಕೃಷಿಗೆ ಬಳಸಿಕೊಳ್ಳಬೇಕು. ಆ ಮೂಲಕ ಭಾರತದ ಕೃಷಿ ಎದುರಿಸುತ್ತಿರುವ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಬೇಕು’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹುಚ್ಚೂಸಾಬ್ ಸಂಡೂರು ‘ದೇಶದ ಬಹುಪಾಲು ರೈತರು ಮುಂಗಾರು ಮಳೆಯನ್ನು ಅವಲಂಬಿಸಿದ್ದಾರೆ. ಕೃಷಿ ವೆಚ್ಚ ಜಾಸ್ತಿಯಾಗಿ ಆದಾಯ ಕುಸಿಯುತ್ತಿದೆ. ಬಡ್ಡಿ ರಹಿತ ಸಾಲ ಸಿಗುತ್ತಿಲ್ಲ. ಅಮೆರಿಕ ಕೃಷಿ ವ್ಯಾಪಾರಿ ಧೋರಣೆ ರೈತರ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ’ ಎಂದರು.</p>.<p>ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ ಮಾತನಾಡಿ, ‘ಕಾಲಮಾನಕ್ಕೆ ಅನುಗುಣವಾಗಿ ರೈತರು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕಿದೆ. ರಾಸಾಯನಿಕ ವಸ್ತುಗಳನ್ನು ಕಡಿಮೆ ಬಳಸಿ ವಿಷಮುಕ್ತ ಆಹಾರ ಪದಾರ್ಥಗಳನ್ನು ಬೆಳೆದು ಭಾರತ ದೇಶದ ಪ್ರಗತಿಗೆ ಕೈಜೋಡಿಸಬೇಕಾದ ಅಗತ್ಯವಿದೆ’ ಎಂದರು.</p>.<p>ವೇದಿಕೆಯ ಮೇಲೆ ಪ್ರಾಧ್ಯಾಪಕ ಗಂಟೆಪ್ಪ ಶೆಟ್ಟಿ, ಅತಿಥಿ ಉಪನ್ಯಾಸಕ ಓಬಣ್ಣ, ಜಯಶೀಲ, ಅರ್ಜುನ್ ಇದ್ದರು. ರೈತರಾದ ಗಣೇಶ ಸ್ವಾಮಿ, ಓಂಕಾರಗೌಡ,ವಿಶ್ವನಾಥ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-417344007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ಉತ್ತಮ ಬೀಜ, ಗೊಬ್ಬರ, ನೀರು ಅಲಭ್ಯತೆ, ಬೆಳೆಗೆ ಸಿಗದ ಬೆಲೆ, ವಾಣಿಜ್ಯೀಕರಣ ನೀತಿಗಳಿಂದಾಗಿ ಈ ದೇಶಕ್ಕೆ ಅನ್ನ ನೀಡುವ ರೈತ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾನೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಮಾಧವರೆಡ್ಡಿ ಕರೂರು ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ ) ಕಾಲೇಜಿನ ಸಭಾಂಗಣದಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ‘ಭಾರತದ ಕೃಷಿ ಬಿಕ್ಕಟ್ಟು’ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಅಭಿವೃದ್ಧಿಯ ಹೆಸರಿನಲ್ಲಿ ಬೃಹತ್ ಕಾರ್ಖಾನೆ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ನೀಡಿ ಕೃಷಿ ಭೂಮಿಯನ್ನು ಬಳಸಿಕೊಂಡು, ಭೂಮಿ ಕಳೆದುಕೊಂಡವರಿಗೆ ಉದ್ಯೋಗದ ಆಮಿಷೆಯನ್ನು ಒಡ್ಡಿ ಆಹಾರದ ಸಮಸ್ಯೆಗೆ ದೇಶವನ್ನು ಒಳಗು ಮಾಡುತ್ತಿರುವುದು ಕಳವಳಕಾರಿ ಸಂಗತಿ’ ಎಂದು ವಿಶ್ಲೇಷಿಸಿದರು.</p>.<p>ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ ‘ಹೊಸ ತಲೆಮಾರಿನವರು ಸರ್ಕಾರಿ ಹುದ್ದೆಯನ್ನು ನೆಚ್ಚಿಕೊಳ್ಳದೆ ತಾವು ಪಡೆದುಕೊಂಡ ಜ್ಞಾನವನ್ನು ಕೃಷಿಗೆ ಬಳಸಿಕೊಳ್ಳಬೇಕು. ಆ ಮೂಲಕ ಭಾರತದ ಕೃಷಿ ಎದುರಿಸುತ್ತಿರುವ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಬೇಕು’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹುಚ್ಚೂಸಾಬ್ ಸಂಡೂರು ‘ದೇಶದ ಬಹುಪಾಲು ರೈತರು ಮುಂಗಾರು ಮಳೆಯನ್ನು ಅವಲಂಬಿಸಿದ್ದಾರೆ. ಕೃಷಿ ವೆಚ್ಚ ಜಾಸ್ತಿಯಾಗಿ ಆದಾಯ ಕುಸಿಯುತ್ತಿದೆ. ಬಡ್ಡಿ ರಹಿತ ಸಾಲ ಸಿಗುತ್ತಿಲ್ಲ. ಅಮೆರಿಕ ಕೃಷಿ ವ್ಯಾಪಾರಿ ಧೋರಣೆ ರೈತರ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ’ ಎಂದರು.</p>.<p>ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ ಮಾತನಾಡಿ, ‘ಕಾಲಮಾನಕ್ಕೆ ಅನುಗುಣವಾಗಿ ರೈತರು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕಿದೆ. ರಾಸಾಯನಿಕ ವಸ್ತುಗಳನ್ನು ಕಡಿಮೆ ಬಳಸಿ ವಿಷಮುಕ್ತ ಆಹಾರ ಪದಾರ್ಥಗಳನ್ನು ಬೆಳೆದು ಭಾರತ ದೇಶದ ಪ್ರಗತಿಗೆ ಕೈಜೋಡಿಸಬೇಕಾದ ಅಗತ್ಯವಿದೆ’ ಎಂದರು.</p>.<p>ವೇದಿಕೆಯ ಮೇಲೆ ಪ್ರಾಧ್ಯಾಪಕ ಗಂಟೆಪ್ಪ ಶೆಟ್ಟಿ, ಅತಿಥಿ ಉಪನ್ಯಾಸಕ ಓಬಣ್ಣ, ಜಯಶೀಲ, ಅರ್ಜುನ್ ಇದ್ದರು. ರೈತರಾದ ಗಣೇಶ ಸ್ವಾಮಿ, ಓಂಕಾರಗೌಡ,ವಿಶ್ವನಾಥ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-417344007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>