<p>ಚನ್ನೇಶಪುರ (ಚನ್ನಗಿರಿ): ಕೃಷಿ ಇಲಾಖೆಯ ಮಾರ್ಗದರ್ಶನದಂತೆ ತಾಲ್ಲೂಕಿನ ಕಸಬಾ ಹೋಬಳಿಯ ಹಿರೇಮಳಲಿ, ಚನ್ನೇಶಪುರ, ಅಜ್ಜಿಹಳ್ಳಿ, ಇಟ್ಟಿಗೆ ಹಾಗೂ ಆಗರಬನ್ನಿಹಟ್ಟಿ ಗ್ರಾಮ ಪಂಚಾಯಿತಿಗಳಲ್ಲಿ ಶುಕ್ರವಾರ ನ್ಯಾನೋ ಗೊಬ್ಬರ ಹಾಗೂ ನೃಸರ್ಗಿಕ ಕೃಷಿ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>‘ರಾಸಾಯನಿಕ ರಸಗೊಬ್ಬರಗಳ ಬಳಕೆಯನ್ನು ನಿಯಂತ್ರಿಸಿ ಮಣ್ಣಿನ ಆರೋಗ್ಯ ಕಾಪಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರೈತರು ಸಮತೋಲಿತ ಪೋಷಕಾಂಶ ನಿರ್ವಹಣೆ ಮತ್ತು ನೃಸರ್ಗಿಕ ಕೃಷಿ ಪದ್ಧತಿಯ ಜತೆಗೆ ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿಯ ಮುಂಗಾರು ದುರ್ಬಲವಾಗುವ ಸಂಭವ ಇರುವುದರಿಂದ ರೈತರು ಹೆಚ್ಚಾಗಿ ಸೋಯಾಬಿನ್, ಅವರೆ ಹಾಗೂ ಇತರೆ ದ್ವಿದಳ ಧಾನ್ಯಗಳನ್ನು ಬೆಳೆಯಬೇಕು’ ಎಂದು ಕೃಷಿ ಅಧಿಕಾರಿ ಮೆಹತಾಬ್ ಆಲಿ ತಿಳಿಸಿದರು.</p>.<p>ತಾಂತ್ರಿಕ ವ್ಯವಸ್ಥಾಪಕಿ ಬಿ.ಎಂ. ಯಶೋಧ್, ಕೃಷಿ ಸಖಿಯರಾದ ರೇಖಾ, ಲಕ್ಷ್ಮೀದೇವಿ, ರೈತರಾದ ಧನಂಜಯ್, ನಾಗರಾಜ್, ಸುರೇಶ್, ಯೋಗೇಂದ್ರಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-826689569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನೇಶಪುರ (ಚನ್ನಗಿರಿ): ಕೃಷಿ ಇಲಾಖೆಯ ಮಾರ್ಗದರ್ಶನದಂತೆ ತಾಲ್ಲೂಕಿನ ಕಸಬಾ ಹೋಬಳಿಯ ಹಿರೇಮಳಲಿ, ಚನ್ನೇಶಪುರ, ಅಜ್ಜಿಹಳ್ಳಿ, ಇಟ್ಟಿಗೆ ಹಾಗೂ ಆಗರಬನ್ನಿಹಟ್ಟಿ ಗ್ರಾಮ ಪಂಚಾಯಿತಿಗಳಲ್ಲಿ ಶುಕ್ರವಾರ ನ್ಯಾನೋ ಗೊಬ್ಬರ ಹಾಗೂ ನೃಸರ್ಗಿಕ ಕೃಷಿ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>‘ರಾಸಾಯನಿಕ ರಸಗೊಬ್ಬರಗಳ ಬಳಕೆಯನ್ನು ನಿಯಂತ್ರಿಸಿ ಮಣ್ಣಿನ ಆರೋಗ್ಯ ಕಾಪಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರೈತರು ಸಮತೋಲಿತ ಪೋಷಕಾಂಶ ನಿರ್ವಹಣೆ ಮತ್ತು ನೃಸರ್ಗಿಕ ಕೃಷಿ ಪದ್ಧತಿಯ ಜತೆಗೆ ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿಯ ಮುಂಗಾರು ದುರ್ಬಲವಾಗುವ ಸಂಭವ ಇರುವುದರಿಂದ ರೈತರು ಹೆಚ್ಚಾಗಿ ಸೋಯಾಬಿನ್, ಅವರೆ ಹಾಗೂ ಇತರೆ ದ್ವಿದಳ ಧಾನ್ಯಗಳನ್ನು ಬೆಳೆಯಬೇಕು’ ಎಂದು ಕೃಷಿ ಅಧಿಕಾರಿ ಮೆಹತಾಬ್ ಆಲಿ ತಿಳಿಸಿದರು.</p>.<p>ತಾಂತ್ರಿಕ ವ್ಯವಸ್ಥಾಪಕಿ ಬಿ.ಎಂ. ಯಶೋಧ್, ಕೃಷಿ ಸಖಿಯರಾದ ರೇಖಾ, ಲಕ್ಷ್ಮೀದೇವಿ, ರೈತರಾದ ಧನಂಜಯ್, ನಾಗರಾಜ್, ಸುರೇಶ್, ಯೋಗೇಂದ್ರಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-826689569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>