‘ತಾಲ್ಲೂಕಿನಲ್ಲಿ ಯಾವುದೇ ನೀರಾವರಿ ಯೋಜನೆ ಇಲ್ಲದೆ ರೈತರು ಮುಂಗಾರು ಬೆಳೆ ಮೇಲೆ ಅವಲಂಬಿಸಿದ್ದಾರೆ. ಆದರೆ ಭಾರಿ ಮಳೆಯಿಂದ ಉದ್ದು, ಹೆಸರು, ಜೋಳ, ತೊಗರಿ ಸೇರಿದಂತೆ ಪ್ರಮುಖ ಬೆಳೆಗಳು ಪೂರ್ಣವಾಗಿ ಹಾಳಾಗಿವೆ. ಕೆಲಬೆಳೆಗಳು ಕೊಚ್ಚಿಕೊಂಡು ಹೋದರೆ, ಇನ್ನು ಕೆಲವು ಬೆಳೆಗಳು ಹೊಲದಲ್ಲಿ ನೀರು ನಿಂತು ಹಾಳಾಗುತ್ತಿವೆ. ಇದರಿಂದ ರೈತರು ಕಂಗಾಲಾಗಿ ಚಿಂತಿತರಾಗಿದ್ದಾರೆ’ ಎಂದು ರೈತ ಮುಖಂಡ ಶ್ರೀಮಂತ ಬಿರಾದಾರ ಕಳವಳ ವ್ಯಕ್ತಪಡಿಸುತ್ತಾರೆ.