ಬೆಳೆ ಸಮೀಕ್ಷೆ ಕಾರ್ಯಕ್ಕೆ ಆ.10ರಂದು ಚಾಲನೆ ನೀಡಿ, ಆ.24ರೊಳಗೆ ರಾಜ್ಯದ ಎಲ್ಲ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಯ ವಿವರಗಳನ್ನು ದಾಖಲಿ ಸಲು ಕೃಷಿ ಇಲಾಖೆ ಅವಕಾಶ ನೀಡಿತ್ತು. ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಮತ್ತೆ ಸೆ.10ರವರೆಗೆ ಅವಧಿ ವಿಸ್ತರಿಸಲಾಗಿತ್ತು. ಅಂಡ್ರಾಯ್ಡ್ ಫೋನ್ ಸೌಲಭ್ಯವಿಲ್ಲದವರಿಗೆ, ರೈತರ ಪರವಾಗಿ ಖಾಸಗಿ ನಿವಾಸಿಗಳ (ಪಿ.ಆರ್) ಮೂಲಕ ಅಪ್ಲೋಡ್ ಮಾಡಲೂ ಅವಕಾಶ ಕಲ್ಪಿಸಲಾಗಿತ್ತು. ಆದರೂ ಪ್ರಗತಿ ಸಾಧ್ಯವಾಗಿಲ್ಲ.