<p>ಬಾದಾಮಿ: 2024-25ನೇ ಸಾಲಿನ ಹಿಂಗಾರು, ಮುಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬಾದಾಮಿ, ಗುಳೇದಗುಡ್ಡ ತಾಲ್ಲೂಕಿನ ರೈತರು ಕರ್ನಾಟಕ ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಪುನಃ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.</p>.<p>ಬಾದಾಮಿ ತಾಲ್ಲೂಕಿನ ಮುಂಗಾರು ಹಂಗಾಮಿನ 43, ಹಿಂಗಾರು ಹಂಗಾಮಿನ 232, ಗುಳೇದಗುಡ್ಡ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ 6 ಮತ್ತು ಹಿಂಗಾರು ಹಂಗಾಮಿನ 45 ಅರ್ಜಿಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ಅಂತಹ ರೈತರ ಹೆಸರುಗಳನ್ನು ಕೃಷಿ, ತೋಟಗಾರಿಕೆ ಇಲಾಖೆ ಮತ್ತು ಬಾದಾಮಿ, ಕೆರೂರ, ಗುಳೇದಗುಡ್ಡ ಮತ್ತು ಕುಳಗೇರಿ ರೈತ ಸಂಪರ್ಕ ಕೇಂದ್ರಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ತಿಳಿಸಲಾಗಿದೆ.</p>.<p>ರೈತರು ಸೂಕ್ತ ದಾಖಲೆಗಳೊಂದಿಗೆ 15 ದಿನದೊಳಗೆ ಕೃಷಿ ಮತ್ತು ತೋಟಗಾರಿಗೆ ಇಲಾಖೆಗೆ ಮರು ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-878385382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾದಾಮಿ: 2024-25ನೇ ಸಾಲಿನ ಹಿಂಗಾರು, ಮುಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬಾದಾಮಿ, ಗುಳೇದಗುಡ್ಡ ತಾಲ್ಲೂಕಿನ ರೈತರು ಕರ್ನಾಟಕ ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಪುನಃ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.</p>.<p>ಬಾದಾಮಿ ತಾಲ್ಲೂಕಿನ ಮುಂಗಾರು ಹಂಗಾಮಿನ 43, ಹಿಂಗಾರು ಹಂಗಾಮಿನ 232, ಗುಳೇದಗುಡ್ಡ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ 6 ಮತ್ತು ಹಿಂಗಾರು ಹಂಗಾಮಿನ 45 ಅರ್ಜಿಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ಅಂತಹ ರೈತರ ಹೆಸರುಗಳನ್ನು ಕೃಷಿ, ತೋಟಗಾರಿಕೆ ಇಲಾಖೆ ಮತ್ತು ಬಾದಾಮಿ, ಕೆರೂರ, ಗುಳೇದಗುಡ್ಡ ಮತ್ತು ಕುಳಗೇರಿ ರೈತ ಸಂಪರ್ಕ ಕೇಂದ್ರಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ತಿಳಿಸಲಾಗಿದೆ.</p>.<p>ರೈತರು ಸೂಕ್ತ ದಾಖಲೆಗಳೊಂದಿಗೆ 15 ದಿನದೊಳಗೆ ಕೃಷಿ ಮತ್ತು ತೋಟಗಾರಿಗೆ ಇಲಾಖೆಗೆ ಮರು ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-878385382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>