ಗ್ರಾಮದ ಮಂಜಪ್ಪ ವರ್ಣೆಕರ ಅವರಿಗೆ ಸೇರಿದ ಸುಮಾರು 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಅತಿವೃಷ್ಟಿಯಿಂದ ಅಲ್ಪ, ಸ್ವಲ್ಪ ಬೆಳೆದಿದ್ದ ಬೆಳೆಯೂ ಆಕಸ್ಮಿಕ ಬೆಂಕಿ ಸಿಲುಕಿ ಹಾಳಾಗಿದೆ. ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು’ ಎಂದು ತಾಲ್ಲೂಕು ಅನ್ನದಾತ ರೈತ ಹೋರಾಟ ಸಮಿತಿ ಅಧ್ಯಕ್ಷ ಗಂಗಾಧರ ಗಡ್ಡೆ ಆಗ್ರಹಿಸಿದ್ದಾರೆ.