ಗಂಗಾಧರ ಅವರು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 6 ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ನಿಫಾ ವೈರಾಣು ಹರಡಿದ ಬೆನ್ನಲ್ಲೇ ಆತಂಕಗೊಂಡು ಸ್ವಗ್ರಾಮಕ್ಕೆ ಮರಳಿದ್ದರು. ಊರಿಗೆ ಮರಳಿದ ನಂತರ ಅವರಿಗೆ ತಲೆಸುತ್ತು, ಕೆಮ್ಮು ಕಾಣಿಸಿಕೊಂಡಿತ್ತು. ಆರಂಭದಲ್ಲಿ ರೋಣ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದರು. ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ನಿಫಾ ಸೋಂಕಿನ ಕೆಲವು ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ‘ಜಿಮ್ಸ್’ಗೆ ದಾಖಲಾಗುವಂತೆ ಸೂಚಿಸಿದ್ದರು.