<p>ಹರಪನಹಳ್ಳಿ: ರೈತರ ನೆರವಿಗಾಗಿ ಇರುವ ಫಸಲ್ ಬಿಮಾ ಯೋಜನೆಯ ವಿಮಾ ಹಣ ಪಡೆಯಲು ಮಧ್ಯವರ್ತಿಗಳ ಕಾಟ ಮಿತಿಮೀರಿದೆ ಎಂದು ಆರೋಪಿಸಿ, ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿಗೆ ರೈತರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಅಖಿಲ ಭಾರತ ಕಿಸಾನ್ ಸಭಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಿದ ರೈತರು ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.</p>.<p>ಎಐಕೆಎಸ್ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ‘ವಿಮಾ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು, ರೈತರಿಂದ ಹಣ ವಸೂಲಿ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಯೋಜನೆಯ ಮೂಲ ಉದ್ದೇಶ ರೈತರನ್ನು ರಕ್ಷಿಸುವುದು. ಆದರೆ ಪ್ರಾಯೋಗಿಕವಾಗಿ ಮಧ್ಯವರ್ತಿಗಳು ಕಮಿಷನ್ ಹೆಸರಿನಲ್ಲಿ ರೈತರ ಹಣವನ್ನು ದೋಚುತ್ತಿದ್ದಾರೆ. ಬೆಳೆ ನಷ್ಟದ ಜೊತೆಗೆ, ವಿಮಾ ಹಣ ಪಡೆಯಲೂ ರೈತರು ಕಚೇರಿಗಳಿಗೆ ಅಲೆಯುವಂತಾಗಿದೆ’ ಎಂದು ಸಿಪಿಐ ತಾಲ್ಲೂಕು ಕಾರ್ಯದರ್ಶಿ ರಮೇಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಖಂಡ ಎಲ್.ಬಿ. ಹಾಲೇಶ್ ನಾಯ್ಕ, ಎಲ್.ಮಂಜ್ಯಾನಾಯ್ಕ, ಬಸವರಾಜ ಹಾವೇರಿ ಮಾತನಾಡಿದರು. ಕೃಷಿ ಅಧಿಕಾರಿ ನಾಗರಾಜ್, ಸಂಗಪ್ಪ, ಪಿಎಸ್ಐ ನಾಗರತ್ನಮ್ಮ, ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಶಿವಪ್ಪ, ಕಾರ್ಯದರ್ಶಿ ಲಕ್ಷ್ಮಿಕಾಂತ್, ಪಕ್ಕೀರಪ್ಪ, ರೈತ ಮುಖಂಡರಾದ ಸ್ವಾಮಿನಾಯ್ಕ, ಹುಲಿಕಟ್ಟೆ ವೀರೇಶ್, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-25-1430015111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ರೈತರ ನೆರವಿಗಾಗಿ ಇರುವ ಫಸಲ್ ಬಿಮಾ ಯೋಜನೆಯ ವಿಮಾ ಹಣ ಪಡೆಯಲು ಮಧ್ಯವರ್ತಿಗಳ ಕಾಟ ಮಿತಿಮೀರಿದೆ ಎಂದು ಆರೋಪಿಸಿ, ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿಗೆ ರೈತರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಅಖಿಲ ಭಾರತ ಕಿಸಾನ್ ಸಭಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಿದ ರೈತರು ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.</p>.<p>ಎಐಕೆಎಸ್ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ‘ವಿಮಾ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು, ರೈತರಿಂದ ಹಣ ವಸೂಲಿ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಡೆಯಬೇಕು’ ಎಂದು ಆಗ್ರಹಿಸಿದರು.</p>.<p>‘ಯೋಜನೆಯ ಮೂಲ ಉದ್ದೇಶ ರೈತರನ್ನು ರಕ್ಷಿಸುವುದು. ಆದರೆ ಪ್ರಾಯೋಗಿಕವಾಗಿ ಮಧ್ಯವರ್ತಿಗಳು ಕಮಿಷನ್ ಹೆಸರಿನಲ್ಲಿ ರೈತರ ಹಣವನ್ನು ದೋಚುತ್ತಿದ್ದಾರೆ. ಬೆಳೆ ನಷ್ಟದ ಜೊತೆಗೆ, ವಿಮಾ ಹಣ ಪಡೆಯಲೂ ರೈತರು ಕಚೇರಿಗಳಿಗೆ ಅಲೆಯುವಂತಾಗಿದೆ’ ಎಂದು ಸಿಪಿಐ ತಾಲ್ಲೂಕು ಕಾರ್ಯದರ್ಶಿ ರಮೇಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಖಂಡ ಎಲ್.ಬಿ. ಹಾಲೇಶ್ ನಾಯ್ಕ, ಎಲ್.ಮಂಜ್ಯಾನಾಯ್ಕ, ಬಸವರಾಜ ಹಾವೇರಿ ಮಾತನಾಡಿದರು. ಕೃಷಿ ಅಧಿಕಾರಿ ನಾಗರಾಜ್, ಸಂಗಪ್ಪ, ಪಿಎಸ್ಐ ನಾಗರತ್ನಮ್ಮ, ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಶಿವಪ್ಪ, ಕಾರ್ಯದರ್ಶಿ ಲಕ್ಷ್ಮಿಕಾಂತ್, ಪಕ್ಕೀರಪ್ಪ, ರೈತ ಮುಖಂಡರಾದ ಸ್ವಾಮಿನಾಯ್ಕ, ಹುಲಿಕಟ್ಟೆ ವೀರೇಶ್, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-25-1430015111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>